ಸವಣೂರು: ಪಾಲ್ತಾಡಿ ಗ್ರಾಮದ ಚೆನ್ನಾವರ ಸ.ಕಿ.ಪ್ರಾ.ಶಾಲೆಯಲ್ಲಿ ಅಭ್ಯುದಯ ಯುವಕ ಮಂಡಲ ಚೆನ್ನಾವರ, ನೆಹರು ಯುವ ಕೇಂದ್ರ ಮಂಗಳೂರು ಇದರ ಸಹಯೋಗದಲ್ಲಿ ಗಾಂಧೀ ಜಯಂತಿ, ಸ್ವಚ್ಚತೆಯ ಕುರಿತು ಉಪನ್ಯಾಸ ನಡೆಯಿತು.
ಚೆನ್ನಾವರ ಶಾಲಾ ಮುಖ್ಯಶಿಕ್ಷಕಿ ಶಾಂತಾ ಕುಮಾರಿ ಎನ್ ಅವರು ಸ್ವಚ್ಚತೆಯ ಕುರಿತು ಮಾತನಾಡಿ ನಮ್ಮ ದೇಶ ಪ್ಲಾಸ್ಟಿಕ್ ಮುಕ್ತವಾದಾಗ ಆರೋಗ್ಯಪೂರ್ಣ ವಾತಾವರಣ ನಿರ್ಮಾಣವಾಗಬಹುದು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪ್ರಸ್ತುತ ಅನಿವಾರ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವಕ ಮಂಡಲದ ಅಧ್ಯಕ್ಷ ಪುಟ್ಟಣ್ಣ ನಾಯ್ಕ ವಹಿಸಿದ್ದರು. ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೀಲಾವತಿ ಧರ್ಮಪಾಲ, ಸದಸ್ಯೆ ಚಂದ್ರಿಕಾ ಜಗದೀಶ್ ,ಯುವಕ ಮಂಡಲದ ಸದಸ್ಯ ಚರಣ್ ರೈ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಗಾಂಧೀ ಸ್ಮೃತಿ, ಭಾಷಣ ನಡೆಯಿತು. ಶಿಕ್ಷಕಿ ಶ್ವೇತಾ ಸ್ವಾಗತಿಸಿ ವಂದಿಸಿದರು.
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…