ಬಾಳುಗೋಡು: ಛೆ…… ಆನೆಗೆ ಕಡಿಮೆಯೇ ಆಗಿಲ್ಲ…!. ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ. ಈಗ ಚೇತರಿಕೆ ಕಂಡುಬಂದಿಲ್ಲ. ಕೀವು ತುಂಬಿದ ಕಾಲಿನಲ್ಲಿ ಅತ್ತಿತ್ತ ಓಡಾಡುತ್ತಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸಲಗದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಿಲ್ಲ . ಸ್ಥಳೀಯ ಮಂದಿ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ವೀಕ್ಷಿಸಿದ್ದಾರೆ. ಜೊತೆಗೆ ಬೈನೆ ಮರದ ಆಹಾರವನ್ನು ಆನೆಗೆ ನೀಡಿ ಬಂದಿದ್ದಾರೆ.ಈ ವೇಳೆ ಆನೆಯು ಚಿಕಿತ್ಸೆ ಪಡೆದ ನಂತರದಲ್ಲಿ ಕೂಡ ಚೇತರಿಕೊಳ್ಳದಿರುವುದು ಅವರಿಗೆ ಕಂಡುಬಂದಿದೆ.ಆನೆಯು ಶಕ್ತಿ ಹೀನವಾಗಿದ್ದು ನೋವು ಉಲ್ಬಣಿಸಿ ನಡೆಯಲು ಕಷ್ಟ ಪಡುತ್ತಿದೆ.
ಈ ನಡುವೆ ಅರಣ್ಯ ಇಲಾಖೆ ಸಿಬಂದಿಗಳು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆನೆಯು ಓಡಲಾಗದೆ ಚಡಪಡಿಸುತಿದ್ದ ಬಗ್ಗೆಯು ಸ್ಥಳಿಯರು ಮಾಹಿತಿ ನೀಡಿದ್ದು ಇದೇ ರೀತಿ ಆನೆಯನ್ನು ಬಿಟ್ಟರೆ ಅದರ ಆರೋಗ್ಯ ಪೂರ್ಣವಾಗಿ ಹದಗೆಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…