ಬಾಳುಗೋಡು: ಛೆ…… ಆನೆಗೆ ಕಡಿಮೆಯೇ ಆಗಿಲ್ಲ…!. ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ. ಈಗ ಚೇತರಿಕೆ ಕಂಡುಬಂದಿಲ್ಲ. ಕೀವು ತುಂಬಿದ ಕಾಲಿನಲ್ಲಿ ಅತ್ತಿತ್ತ ಓಡಾಡುತ್ತಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸಲಗದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಿಲ್ಲ . ಸ್ಥಳೀಯ ಮಂದಿ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ವೀಕ್ಷಿಸಿದ್ದಾರೆ. ಜೊತೆಗೆ ಬೈನೆ ಮರದ ಆಹಾರವನ್ನು ಆನೆಗೆ ನೀಡಿ ಬಂದಿದ್ದಾರೆ.ಈ ವೇಳೆ ಆನೆಯು ಚಿಕಿತ್ಸೆ ಪಡೆದ ನಂತರದಲ್ಲಿ ಕೂಡ ಚೇತರಿಕೊಳ್ಳದಿರುವುದು ಅವರಿಗೆ ಕಂಡುಬಂದಿದೆ.ಆನೆಯು ಶಕ್ತಿ ಹೀನವಾಗಿದ್ದು ನೋವು ಉಲ್ಬಣಿಸಿ ನಡೆಯಲು ಕಷ್ಟ ಪಡುತ್ತಿದೆ.
ಈ ನಡುವೆ ಅರಣ್ಯ ಇಲಾಖೆ ಸಿಬಂದಿಗಳು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆನೆಯು ಓಡಲಾಗದೆ ಚಡಪಡಿಸುತಿದ್ದ ಬಗ್ಗೆಯು ಸ್ಥಳಿಯರು ಮಾಹಿತಿ ನೀಡಿದ್ದು ಇದೇ ರೀತಿ ಆನೆಯನ್ನು ಬಿಟ್ಟರೆ ಅದರ ಆರೋಗ್ಯ ಪೂರ್ಣವಾಗಿ ಹದಗೆಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…