ಬಾಳುಗೋಡು: ಛೆ…… ಆನೆಗೆ ಕಡಿಮೆಯೇ ಆಗಿಲ್ಲ…!. ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ. ಈಗ ಚೇತರಿಕೆ ಕಂಡುಬಂದಿಲ್ಲ. ಕೀವು ತುಂಬಿದ ಕಾಲಿನಲ್ಲಿ ಅತ್ತಿತ್ತ ಓಡಾಡುತ್ತಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸಲಗದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಿಲ್ಲ . ಸ್ಥಳೀಯ ಮಂದಿ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ವೀಕ್ಷಿಸಿದ್ದಾರೆ. ಜೊತೆಗೆ ಬೈನೆ ಮರದ ಆಹಾರವನ್ನು ಆನೆಗೆ ನೀಡಿ ಬಂದಿದ್ದಾರೆ.ಈ ವೇಳೆ ಆನೆಯು ಚಿಕಿತ್ಸೆ ಪಡೆದ ನಂತರದಲ್ಲಿ ಕೂಡ ಚೇತರಿಕೊಳ್ಳದಿರುವುದು ಅವರಿಗೆ ಕಂಡುಬಂದಿದೆ.ಆನೆಯು ಶಕ್ತಿ ಹೀನವಾಗಿದ್ದು ನೋವು ಉಲ್ಬಣಿಸಿ ನಡೆಯಲು ಕಷ್ಟ ಪಡುತ್ತಿದೆ.
ಈ ನಡುವೆ ಅರಣ್ಯ ಇಲಾಖೆ ಸಿಬಂದಿಗಳು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆನೆಯು ಓಡಲಾಗದೆ ಚಡಪಡಿಸುತಿದ್ದ ಬಗ್ಗೆಯು ಸ್ಥಳಿಯರು ಮಾಹಿತಿ ನೀಡಿದ್ದು ಇದೇ ರೀತಿ ಆನೆಯನ್ನು ಬಿಟ್ಟರೆ ಅದರ ಆರೋಗ್ಯ ಪೂರ್ಣವಾಗಿ ಹದಗೆಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…