ಬಾಳುಗೋಡು: ಛೆ…… ಆನೆಗೆ ಕಡಿಮೆಯೇ ಆಗಿಲ್ಲ…!. ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ. ಈಗ ಚೇತರಿಕೆ ಕಂಡುಬಂದಿಲ್ಲ. ಕೀವು ತುಂಬಿದ ಕಾಲಿನಲ್ಲಿ ಅತ್ತಿತ್ತ ಓಡಾಡುತ್ತಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸಲಗದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಿಲ್ಲ . ಸ್ಥಳೀಯ ಮಂದಿ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ವೀಕ್ಷಿಸಿದ್ದಾರೆ. ಜೊತೆಗೆ ಬೈನೆ ಮರದ ಆಹಾರವನ್ನು ಆನೆಗೆ ನೀಡಿ ಬಂದಿದ್ದಾರೆ.ಈ ವೇಳೆ ಆನೆಯು ಚಿಕಿತ್ಸೆ ಪಡೆದ ನಂತರದಲ್ಲಿ ಕೂಡ ಚೇತರಿಕೊಳ್ಳದಿರುವುದು ಅವರಿಗೆ ಕಂಡುಬಂದಿದೆ.ಆನೆಯು ಶಕ್ತಿ ಹೀನವಾಗಿದ್ದು ನೋವು ಉಲ್ಬಣಿಸಿ ನಡೆಯಲು ಕಷ್ಟ ಪಡುತ್ತಿದೆ.
ಈ ನಡುವೆ ಅರಣ್ಯ ಇಲಾಖೆ ಸಿಬಂದಿಗಳು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆನೆಯು ಓಡಲಾಗದೆ ಚಡಪಡಿಸುತಿದ್ದ ಬಗ್ಗೆಯು ಸ್ಥಳಿಯರು ಮಾಹಿತಿ ನೀಡಿದ್ದು ಇದೇ ರೀತಿ ಆನೆಯನ್ನು ಬಿಟ್ಟರೆ ಅದರ ಆರೋಗ್ಯ ಪೂರ್ಣವಾಗಿ ಹದಗೆಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…