ಬಾಳುಗೋಡು: ಛೆ…… ಆನೆಗೆ ಕಡಿಮೆಯೇ ಆಗಿಲ್ಲ…!. ಹೀಗೆಂದು ಪ್ರೀತಿ ತೋರಿಸುತ್ತಿರುವವರು ಬಾಳುಗೋಡು ಪ್ರದೇಶದ ಜನ. ಅರಣ್ಯ ಇಲಾಖೆ ತನ್ನ ಪ್ರಯತ್ನ ಮಾಡುತ್ತಿದ್ದರೂ ಕಾಡಾನೆಗೆ ಒಂದಿಲ್ಲೊಂದು ಕಾಟ ತಪ್ಪಲಿಲ್ಲ. ಈಗ ಚೇತರಿಕೆ ಕಂಡುಬಂದಿಲ್ಲ. ಕೀವು ತುಂಬಿದ ಕಾಲಿನಲ್ಲಿ ಅತ್ತಿತ್ತ ಓಡಾಡುತ್ತಿದೆ.
ಬಾಳುಗೋಡು ಮೀಸಲು ಅರಣ್ಯದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಸಲಗದ ಆರೋಗ್ಯದಲ್ಲಿ ಹೆಚ್ಚಿನ ಚೇತರಿಕೆ ಕಂಡುಬಂದಿಲ್ಲ . ಸ್ಥಳೀಯ ಮಂದಿ ಕಾಡಿಗೆ ತೆರಳಿ ಆನೆಯ ಚಲನವಲನವನ್ನು ವೀಕ್ಷಿಸಿದ್ದಾರೆ. ಜೊತೆಗೆ ಬೈನೆ ಮರದ ಆಹಾರವನ್ನು ಆನೆಗೆ ನೀಡಿ ಬಂದಿದ್ದಾರೆ.ಈ ವೇಳೆ ಆನೆಯು ಚಿಕಿತ್ಸೆ ಪಡೆದ ನಂತರದಲ್ಲಿ ಕೂಡ ಚೇತರಿಕೊಳ್ಳದಿರುವುದು ಅವರಿಗೆ ಕಂಡುಬಂದಿದೆ.ಆನೆಯು ಶಕ್ತಿ ಹೀನವಾಗಿದ್ದು ನೋವು ಉಲ್ಬಣಿಸಿ ನಡೆಯಲು ಕಷ್ಟ ಪಡುತ್ತಿದೆ.
ಈ ನಡುವೆ ಅರಣ್ಯ ಇಲಾಖೆ ಸಿಬಂದಿಗಳು ಪಟಾಕಿ ಸಿಡಿಸಿ ಆನೆಯನ್ನು ಓಡಿಸಲು ಯತ್ನಿಸಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆನೆಯು ಓಡಲಾಗದೆ ಚಡಪಡಿಸುತಿದ್ದ ಬಗ್ಗೆಯು ಸ್ಥಳಿಯರು ಮಾಹಿತಿ ನೀಡಿದ್ದು ಇದೇ ರೀತಿ ಆನೆಯನ್ನು ಬಿಟ್ಟರೆ ಅದರ ಆರೋಗ್ಯ ಪೂರ್ಣವಾಗಿ ಹದಗೆಡಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…