ಚೊಕ್ಕಾಡಿ: ಅಮರ ಸಂಘಟನಾ ಸಮಿತಿ ಅಮರ ಮೂಡ್ನೂರು ಮತ್ತು ಪಡ್ನೂರು ಇದರ ಆಶ್ರಯದಲ್ಲಿ ಅಮರ ಜ್ಞಾನ ಕಾರ್ಯಕ್ರಮ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಚೊಕ್ಕಾಡಿ ಪ್ರೌಢಶಾಲೆ ಪ್ರಭಾರ ಮುಖ್ಯಗುರು ಚಂದ್ರಶೇಖರ ಮೂಕಮಲೆ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ ಅಧ್ಯಕ್ಷ
ಶಿವಪ್ರಸಾದ್ ದೊಡ್ಡಿಹಿತ್ಲು ಅಧ್ಯಕ್ಷರು ಅಮರ ಸಂಘಟನಾ ಸಮಿತಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಸುಲೋಚನ ಗೌಡ ದೊಡ್ಡಿಹಿತ್ಲು ಸಂಚಾಲಕರು ಉಪಸ್ಥಿತರಿದ್ದರು.
ನಂತರ ಸತೀಶ್ ಭಟ್ ಬಿಳಿನೆಲೆ ಇವರಿಂದ ನನ್ನ ಕನಸು ನನ್ನ ಭವಿಷ್ಯ ಪ್ರೌಢಶಿಕ್ಷಣದ ನಂತರ ಮುಂದಿನ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಪೋಷಕರ ಆರೋಗ್ಯದ ಬಗ್ಗೆ ಡಾ| ಪ್ರಿಯಾಂಕ ನಾಟಿಕೇರಿ ಇವರು ಮಾಹಿತಿ ನೀಡಿದರು. ವಿದ್ಯಾರ್ಥಿಗಳಿಗೆ ಬ್ಯಾಂಕ್ ಸೌಲಭ್ಯಗಳ ಮಾಹಿತಿಯನ್ನು ಬ್ಯಾಂಕ್ ಬರೋಡ ಕುಕ್ಕುಜಡ್ಕ ಶಾಖೆಯ ಮ್ಯಾನೇಜರ್ ನಿಡಿದರು.
ಬಳಿಕ ಅಗ್ನಿ ಶಾಮಕ ಠಾಣೆ ಸುಳ್ಯ ಇವರಿಂದ ಅಗ್ನಿ ಶಮನದ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕ, ಸ.ಹಿ.ಪ್ರಾ ಶಾಲೆ ಕುಕ್ಕುಜಡ್ಕ,ಸ.ಹಿ.ಪ್ರ.ಶಾಲೆ ಪೈಲಾರು, ಸ.ಹಿ.ಪ್ರ ಶಾಲೆ ಅಜ್ಜನಗದ್ದೆ, ಸ.ಹಿ.ಪ್ರ ಶಾಲೆ ದೊಡ್ಡತೋಟ, ಸ.ಹಿ.ಪ್ರಾ.ಶಾಲೆ ಶೇಣಿ ಯ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಭಾಗವಹಿಸಿದರು.
ಮಿಥುನ್ ಕೆರೆಗದ್ದೆ ಸದಸ್ಯರು ಸ್ವಾಗತ ನೆರವೇರಿಸಿದರು. ಪ್ರದೀಪ್ ಬೊಳ್ಳೂರು ಸ್ಥಾಪಕಾಧ್ಯಕ್ಷರು ಧನ್ಯವಾಧ ನೆರವೇರಿಸಿದರು, ಶಶಿಕಾಂತ್ ಮಿತ್ತೂರು ಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿದರು
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…