ಚೊಕ್ಕಾಡಿ: ಶ್ರೀರಾಮ ಸೇವಾ ಸಮಿತಿ ಮತ್ತು ಚೊಕ್ಕಾಡಿ ಹವ್ಯಕ ವಲಯದ ಆಶ್ರಯದಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಪ್ರಾಯೋಜಕತ್ವದೊಂದಿಗೆ ಶ್ರೀರಾಮ ದೇವಾಲಯದಲ್ಲಿ ರಕ್ತದಾನ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಉಪ್ಪಿನಂಗಡಿ ಹವ್ಯಕ ಮಹಾಮಂಡಲದ ಅಧ್ಯಕ್ಷ ಅಶೋಕ ಕೆದಿಲ,’ ದಾನಗಳಲ್ಲಿ ಶ್ರೇಷ್ಠವಾದ ದಾನವೇ ರಕ್ತದಾನ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬಲ್ಲ ಕಾರ್ಯ ರಕ್ತದಾನವಾಗಿದೆ. ಆರೋಗ್ಯಕ್ಕೂ ರಕ್ತದಾನ ಒಳ್ಳೆಯದು’ ಎಂದು ಹೇಳಿದರು.
ರಕ್ತದಾನ ಶಿಬಿರದ ರೂವಾರಿ ಜಿಲ್ಲಾ ಗೃಹರಕ್ಷಕ ದಳದ ಮುಖ್ಯ ಸಮಾದೇಷ್ಠ ಮುರಳಿಮೋಹನ್ ಚೂಂತಾರು ಮಾತನಾಡಿ ಪಟ್ಟಣಗಳಲ್ಲಿ ರಕ್ತದಾನಗಳು ಸದಾ ನಡೆಯುತ್ತಲೇ ಇರುತ್ತದೆ. ಆದರೆ ಹಳ್ಳಿಗಳು ಹಾಗು ತೀರಾ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ರಕ್ತದಾನದ ಅವಶ್ಯಕತೆ, ಉಪಯೋಗದ ಅರಿವು ಇರುವುದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರಬೇಕು ಎಂದು ಹೇಳಿದರು.
50ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮೀನಾರಾಯಣ ಭಟ್ ಚೂಂತಾರು, ಹವ್ಯಕ ಮಹಾಮಂಡಲ ವಲಯ ಅಧ್ಯಕ್ಷ ಸುರೇಶ್ಚಂದ್ರ ಕಲ್ಮಡ್ಕ, ಕಾರ್ಯದರ್ಶಿ ವೇಣುಗೋಪಾಲ ಕೆದ್ಲ, ಶ್ರೀರಾಮ ದೇವಾಲಯದ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗು ತಂತ್ರಜ್ಞ ಡಾ| ಆಂಟೊನಿ ಉಪಸ್ಥಿತರಿದ್ದರು.
ಬೆಳಾಲು ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…