ಚೊಕ್ಕಾಡಿ: ಶ್ರೀರಾಮ ಸೇವಾ ಸಮಿತಿ ಮತ್ತು ಚೊಕ್ಕಾಡಿ ಹವ್ಯಕ ವಲಯದ ಆಶ್ರಯದಲ್ಲಿ ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಪ್ರಾಯೋಜಕತ್ವದೊಂದಿಗೆ ಶ್ರೀರಾಮ ದೇವಾಲಯದಲ್ಲಿ ರಕ್ತದಾನ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಉಪ್ಪಿನಂಗಡಿ ಹವ್ಯಕ ಮಹಾಮಂಡಲದ ಅಧ್ಯಕ್ಷ ಅಶೋಕ ಕೆದಿಲ,’ ದಾನಗಳಲ್ಲಿ ಶ್ರೇಷ್ಠವಾದ ದಾನವೇ ರಕ್ತದಾನ. ಸಮಾಜದ ಸ್ವಾಸ್ಥ್ಯವನ್ನು ಕಾಪಾಡಬಲ್ಲ ಕಾರ್ಯ ರಕ್ತದಾನವಾಗಿದೆ. ಆರೋಗ್ಯಕ್ಕೂ ರಕ್ತದಾನ ಒಳ್ಳೆಯದು’ ಎಂದು ಹೇಳಿದರು.
ರಕ್ತದಾನ ಶಿಬಿರದ ರೂವಾರಿ ಜಿಲ್ಲಾ ಗೃಹರಕ್ಷಕ ದಳದ ಮುಖ್ಯ ಸಮಾದೇಷ್ಠ ಮುರಳಿಮೋಹನ್ ಚೂಂತಾರು ಮಾತನಾಡಿ ಪಟ್ಟಣಗಳಲ್ಲಿ ರಕ್ತದಾನಗಳು ಸದಾ ನಡೆಯುತ್ತಲೇ ಇರುತ್ತದೆ. ಆದರೆ ಹಳ್ಳಿಗಳು ಹಾಗು ತೀರಾ ಗ್ರಾಮೀಣ ಭಾಗದ ಪ್ರದೇಶಗಳಲ್ಲಿ ರಕ್ತದಾನದ ಅವಶ್ಯಕತೆ, ಉಪಯೋಗದ ಅರಿವು ಇರುವುದಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರಬೇಕು ಎಂದು ಹೇಳಿದರು.
50ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ಅಧ್ಯಕ್ಷ ಲಕ್ಷ್ಮೀನಾರಾಯಣ ಭಟ್ ಚೂಂತಾರು, ಹವ್ಯಕ ಮಹಾಮಂಡಲ ವಲಯ ಅಧ್ಯಕ್ಷ ಸುರೇಶ್ಚಂದ್ರ ಕಲ್ಮಡ್ಕ, ಕಾರ್ಯದರ್ಶಿ ವೇಣುಗೋಪಾಲ ಕೆದ್ಲ, ಶ್ರೀರಾಮ ದೇವಾಲಯದ ಅಧ್ಯಕ್ಷ ಮಹೇಶ್ ಭಟ್ ಚೂಂತಾರು, ಮಂಗಳೂರು ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗು ತಂತ್ರಜ್ಞ ಡಾ| ಆಂಟೊನಿ ಉಪಸ್ಥಿತರಿದ್ದರು.
ಬೆಳಾಲು ಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…