Advertisement

ಚೌಕಿದಾರ್ ಹೆಸರಿನಲ್ಲಿ ದೇಶವನ್ನೇ ಲೂಟಿಗೈದ ಮೋದಿ ಸರಕಾರ

Share
ಮಂಗಳೂರು: *ಕಳೆದ 5 ವರ್ಷಗಳ ಹಿಂದೆ ಕಪ್ಪುಹಣ ತರುವುದಾಗಿ, ಭ್ರಷ್ಟಾಚಾರ ನಿಗ್ರಹಿಸುವುದಾಗಿ, ಅಚ್ಛೇದಿನ್,ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಮುಂತಾದ ಪೊಳ್ಳು ಭರವಸೆಗಳನ್ನು ನೀಡಿ,ತನ್ನನ್ನು ತಾನು ಚಾಯ್ ವಾಲಾ,ಫಕೀರ ಮುಂತಾದ ಹೆಸರಿನಿಂದ ಕರೆಸಿಕೊಂಡು ದೇಶದ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿ ಜನರ ಬದುಕನ್ನು ಸಂಕಷ್ಠಕ್ಕೆ ದೂಡಿದ ನರೇಂದ್ರ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರಿದರೆ ದೇಶದ ಜಾತ್ಯಾತೀತ ಪರಂಪರೆ ಮತ್ತಷ್ಟು ಅಪಾಯವನ್ನು ಎದುರಿಸಲಿದೆ* ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ತೀವ್ರ ಆತಂಕವನ್ನು ವ್ಯಕ್ತಪಡಿಸಿದರು.
ಅವರು ಉರ್ವಾಸ್ಟೋರಿನಲ್ಲಿ ಜರುಗಿದ CPIM ಪಕ್ಷದ ಕಾರ್ಯಕರ್ತರ,ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶ ಕಟ್ಟಬೇಕಾದ ಯುವ ಜನತೆಗೆ ತಾನು ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸ್ರಷ್ಠಿಸುವುದಾಗಿ, ಅದಕ್ಕಾಗಿ ಮೇಕ್ ಇನ್ ಇಂಡಿಯಾ ಎಂಬ ಘೋಷಣೆಯನ್ನು ನೀಡಿದ ನರೇಂದ್ರ ಮೋದಿಯವರು, ಕಳೆದ 5 ವರ್ಷದಲ್ಲಿ ಸೃಷ್ಠಿಯಾಗಬೇಕಾಗಿದ್ದ10 ಕೋಟಿ ಉದ್ಯೋಗದಲ್ಲಿ ಕನಿಷ್ಠ 10 ಲಕ್ಷ ಉದ್ಯೋಗವೂ ಸೃಷ್ಠಿಯಾಗಿಲ್ಲ ಎಂಬುದನ್ನು ಕೇಂದ್ರ ಸರಕಾರದ ಇಲಾಖೆಯೇ ದೃಢಪಡಿಸಿದೆ. ಈಗ ತಾನು ದೇಶ ಕಾಯುವ ಕಾವಲುಗಾರನಂತೆ ಬಿಂಬಿಸಿ,ಚೌಕಿದಾರ್ ಹೆಸರಿನಲ್ಲಿ ಮತ್ತೆ ದೇಶವನ್ನು ಲೂಟಿಗೈಯ್ಯಲು ಸಂಚು ರೂಪಿಸುತ್ತಿದೆ* ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಪಕ್ಷದ ನಾಯಕರಾದ ಮನೋಜ್ ಉರ್ವಾಸ್ಟೋರು ವಹಿಸಿದ್ದರು.ವೇದಿಕೆಯಲ್ಲಿ ಸಿಪಿಎಂ ನಾಯಕರಾದ ಪ್ರದೀಪ್, ರಘುವೀರ್, ಕಿಶೋರ್,ಇಕ್ಬಾಲ್, ನಾಗೇಂದ್ರರವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

4 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

13 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

22 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago