Advertisement

ಚೌಕಿದಾರ್ ಹೆಸರಿನಲ್ಲಿ ದೇಶವನ್ನೇ ಲೂಟಿಗೈದ ಮೋದಿ ಸರಕಾರ

Share
ಮಂಗಳೂರು: *ಕಳೆದ 5 ವರ್ಷಗಳ ಹಿಂದೆ ಕಪ್ಪುಹಣ ತರುವುದಾಗಿ, ಭ್ರಷ್ಟಾಚಾರ ನಿಗ್ರಹಿಸುವುದಾಗಿ, ಅಚ್ಛೇದಿನ್,ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಮುಂತಾದ ಪೊಳ್ಳು ಭರವಸೆಗಳನ್ನು ನೀಡಿ,ತನ್ನನ್ನು ತಾನು ಚಾಯ್ ವಾಲಾ,ಫಕೀರ ಮುಂತಾದ ಹೆಸರಿನಿಂದ ಕರೆಸಿಕೊಂಡು ದೇಶದ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿ ಜನರ ಬದುಕನ್ನು ಸಂಕಷ್ಠಕ್ಕೆ ದೂಡಿದ ನರೇಂದ್ರ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರಿದರೆ ದೇಶದ ಜಾತ್ಯಾತೀತ ಪರಂಪರೆ ಮತ್ತಷ್ಟು ಅಪಾಯವನ್ನು ಎದುರಿಸಲಿದೆ* ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ತೀವ್ರ ಆತಂಕವನ್ನು ವ್ಯಕ್ತಪಡಿಸಿದರು.
ಅವರು ಉರ್ವಾಸ್ಟೋರಿನಲ್ಲಿ ಜರುಗಿದ CPIM ಪಕ್ಷದ ಕಾರ್ಯಕರ್ತರ,ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶ ಕಟ್ಟಬೇಕಾದ ಯುವ ಜನತೆಗೆ ತಾನು ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸ್ರಷ್ಠಿಸುವುದಾಗಿ, ಅದಕ್ಕಾಗಿ ಮೇಕ್ ಇನ್ ಇಂಡಿಯಾ ಎಂಬ ಘೋಷಣೆಯನ್ನು ನೀಡಿದ ನರೇಂದ್ರ ಮೋದಿಯವರು, ಕಳೆದ 5 ವರ್ಷದಲ್ಲಿ ಸೃಷ್ಠಿಯಾಗಬೇಕಾಗಿದ್ದ10 ಕೋಟಿ ಉದ್ಯೋಗದಲ್ಲಿ ಕನಿಷ್ಠ 10 ಲಕ್ಷ ಉದ್ಯೋಗವೂ ಸೃಷ್ಠಿಯಾಗಿಲ್ಲ ಎಂಬುದನ್ನು ಕೇಂದ್ರ ಸರಕಾರದ ಇಲಾಖೆಯೇ ದೃಢಪಡಿಸಿದೆ. ಈಗ ತಾನು ದೇಶ ಕಾಯುವ ಕಾವಲುಗಾರನಂತೆ ಬಿಂಬಿಸಿ,ಚೌಕಿದಾರ್ ಹೆಸರಿನಲ್ಲಿ ಮತ್ತೆ ದೇಶವನ್ನು ಲೂಟಿಗೈಯ್ಯಲು ಸಂಚು ರೂಪಿಸುತ್ತಿದೆ* ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಪಕ್ಷದ ನಾಯಕರಾದ ಮನೋಜ್ ಉರ್ವಾಸ್ಟೋರು ವಹಿಸಿದ್ದರು.ವೇದಿಕೆಯಲ್ಲಿ ಸಿಪಿಎಂ ನಾಯಕರಾದ ಪ್ರದೀಪ್, ರಘುವೀರ್, ಕಿಶೋರ್,ಇಕ್ಬಾಲ್, ನಾಗೇಂದ್ರರವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

2 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

2 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

17 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

1 day ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

1 day ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago