Advertisement

ಚೌಕಿದಾರ್ ಹೆಸರಿನಲ್ಲಿ ದೇಶವನ್ನೇ ಲೂಟಿಗೈದ ಮೋದಿ ಸರಕಾರ

Share
ಮಂಗಳೂರು: *ಕಳೆದ 5 ವರ್ಷಗಳ ಹಿಂದೆ ಕಪ್ಪುಹಣ ತರುವುದಾಗಿ, ಭ್ರಷ್ಟಾಚಾರ ನಿಗ್ರಹಿಸುವುದಾಗಿ, ಅಚ್ಛೇದಿನ್,ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಮುಂತಾದ ಪೊಳ್ಳು ಭರವಸೆಗಳನ್ನು ನೀಡಿ,ತನ್ನನ್ನು ತಾನು ಚಾಯ್ ವಾಲಾ,ಫಕೀರ ಮುಂತಾದ ಹೆಸರಿನಿಂದ ಕರೆಸಿಕೊಂಡು ದೇಶದ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿ ಜನರ ಬದುಕನ್ನು ಸಂಕಷ್ಠಕ್ಕೆ ದೂಡಿದ ನರೇಂದ್ರ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರಿದರೆ ದೇಶದ ಜಾತ್ಯಾತೀತ ಪರಂಪರೆ ಮತ್ತಷ್ಟು ಅಪಾಯವನ್ನು ಎದುರಿಸಲಿದೆ* ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ತೀವ್ರ ಆತಂಕವನ್ನು ವ್ಯಕ್ತಪಡಿಸಿದರು.
ಅವರು ಉರ್ವಾಸ್ಟೋರಿನಲ್ಲಿ ಜರುಗಿದ CPIM ಪಕ್ಷದ ಕಾರ್ಯಕರ್ತರ,ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶ ಕಟ್ಟಬೇಕಾದ ಯುವ ಜನತೆಗೆ ತಾನು ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸ್ರಷ್ಠಿಸುವುದಾಗಿ, ಅದಕ್ಕಾಗಿ ಮೇಕ್ ಇನ್ ಇಂಡಿಯಾ ಎಂಬ ಘೋಷಣೆಯನ್ನು ನೀಡಿದ ನರೇಂದ್ರ ಮೋದಿಯವರು, ಕಳೆದ 5 ವರ್ಷದಲ್ಲಿ ಸೃಷ್ಠಿಯಾಗಬೇಕಾಗಿದ್ದ10 ಕೋಟಿ ಉದ್ಯೋಗದಲ್ಲಿ ಕನಿಷ್ಠ 10 ಲಕ್ಷ ಉದ್ಯೋಗವೂ ಸೃಷ್ಠಿಯಾಗಿಲ್ಲ ಎಂಬುದನ್ನು ಕೇಂದ್ರ ಸರಕಾರದ ಇಲಾಖೆಯೇ ದೃಢಪಡಿಸಿದೆ. ಈಗ ತಾನು ದೇಶ ಕಾಯುವ ಕಾವಲುಗಾರನಂತೆ ಬಿಂಬಿಸಿ,ಚೌಕಿದಾರ್ ಹೆಸರಿನಲ್ಲಿ ಮತ್ತೆ ದೇಶವನ್ನು ಲೂಟಿಗೈಯ್ಯಲು ಸಂಚು ರೂಪಿಸುತ್ತಿದೆ* ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಪಕ್ಷದ ನಾಯಕರಾದ ಮನೋಜ್ ಉರ್ವಾಸ್ಟೋರು ವಹಿಸಿದ್ದರು.ವೇದಿಕೆಯಲ್ಲಿ ಸಿಪಿಎಂ ನಾಯಕರಾದ ಪ್ರದೀಪ್, ರಘುವೀರ್, ಕಿಶೋರ್,ಇಕ್ಬಾಲ್, ನಾಗೇಂದ್ರರವರು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

4 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

16 hours ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

17 hours ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

18 hours ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

1 day ago

ಹಲಸಿನ ಬೀಜದ ಸಿಪ್ಪೆಯಿಂದ ಕೈಗಾರಿಕಾ ಬಳಕೆಯ ಸೆಲ್ಯುಲೋಸ್..! ರೈತರಿಗೆ ಮೌಲ್ಯವರ್ಧನೆಯ ಹೊಸ ಅವಕಾಶ

ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…

1 day ago