Advertisement

ಚೌಕಿದಾರ್ ಹೆಸರಿನಲ್ಲಿ ದೇಶವನ್ನೇ ಲೂಟಿಗೈದ ಮೋದಿ ಸರಕಾರ

Share
ಮಂಗಳೂರು: *ಕಳೆದ 5 ವರ್ಷಗಳ ಹಿಂದೆ ಕಪ್ಪುಹಣ ತರುವುದಾಗಿ, ಭ್ರಷ್ಟಾಚಾರ ನಿಗ್ರಹಿಸುವುದಾಗಿ, ಅಚ್ಛೇದಿನ್,ಸಬ್ ಕಾ ಸಾಥ್– ಸಬ್ ಕಾ ವಿಕಾಸ್ ಮುಂತಾದ ಪೊಳ್ಳು ಭರವಸೆಗಳನ್ನು ನೀಡಿ,ತನ್ನನ್ನು ತಾನು ಚಾಯ್ ವಾಲಾ,ಫಕೀರ ಮುಂತಾದ ಹೆಸರಿನಿಂದ ಕರೆಸಿಕೊಂಡು ದೇಶದ ಜನರಿಗೆ ಮಂಕುಬೂದಿ ಎರಚಿ ಇಡೀ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿ ಜನರ ಬದುಕನ್ನು ಸಂಕಷ್ಠಕ್ಕೆ ದೂಡಿದ ನರೇಂದ್ರ ಮೋದಿ ಸರಕಾರ ಮತ್ತೊಮ್ಮೆ ಅಧಿಕಾರಕ್ಕೇರಿದರೆ ದೇಶದ ಜಾತ್ಯಾತೀತ ಪರಂಪರೆ ಮತ್ತಷ್ಟು ಅಪಾಯವನ್ನು ಎದುರಿಸಲಿದೆ* ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ರವರು ತೀವ್ರ ಆತಂಕವನ್ನು ವ್ಯಕ್ತಪಡಿಸಿದರು.
ಅವರು ಉರ್ವಾಸ್ಟೋರಿನಲ್ಲಿ ಜರುಗಿದ CPIM ಪಕ್ಷದ ಕಾರ್ಯಕರ್ತರ,ಹಿತೈಷಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ದೇಶ ಕಟ್ಟಬೇಕಾದ ಯುವ ಜನತೆಗೆ ತಾನು ಅಧಿಕಾರಕ್ಕೆ ಬಂದರೆ ವರ್ಷಕ್ಕೆ 2 ಕೋಟಿ ಉದ್ಯೋಗ ಸ್ರಷ್ಠಿಸುವುದಾಗಿ, ಅದಕ್ಕಾಗಿ ಮೇಕ್ ಇನ್ ಇಂಡಿಯಾ ಎಂಬ ಘೋಷಣೆಯನ್ನು ನೀಡಿದ ನರೇಂದ್ರ ಮೋದಿಯವರು, ಕಳೆದ 5 ವರ್ಷದಲ್ಲಿ ಸೃಷ್ಠಿಯಾಗಬೇಕಾಗಿದ್ದ10 ಕೋಟಿ ಉದ್ಯೋಗದಲ್ಲಿ ಕನಿಷ್ಠ 10 ಲಕ್ಷ ಉದ್ಯೋಗವೂ ಸೃಷ್ಠಿಯಾಗಿಲ್ಲ ಎಂಬುದನ್ನು ಕೇಂದ್ರ ಸರಕಾರದ ಇಲಾಖೆಯೇ ದೃಢಪಡಿಸಿದೆ. ಈಗ ತಾನು ದೇಶ ಕಾಯುವ ಕಾವಲುಗಾರನಂತೆ ಬಿಂಬಿಸಿ,ಚೌಕಿದಾರ್ ಹೆಸರಿನಲ್ಲಿ ಮತ್ತೆ ದೇಶವನ್ನು ಲೂಟಿಗೈಯ್ಯಲು ಸಂಚು ರೂಪಿಸುತ್ತಿದೆ* ಎಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಪಕ್ಷದ ನಾಯಕರಾದ ಮನೋಜ್ ಉರ್ವಾಸ್ಟೋರು ವಹಿಸಿದ್ದರು.ವೇದಿಕೆಯಲ್ಲಿ ಸಿಪಿಎಂ ನಾಯಕರಾದ ಪ್ರದೀಪ್, ರಘುವೀರ್, ಕಿಶೋರ್,ಇಕ್ಬಾಲ್, ನಾಗೇಂದ್ರರವರು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

5 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

5 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

22 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago