ಚೌಕೀದಾರರೇ ಎಲ್ಲಿದ್ದೀರಿ… ಕಾಮಗಾರಿ ಬಗ್ಗೆ ಮಾತನಾಡಿದ್ದಕ್ಕೆ ಇಲ್ಲಿದೆ ನೋಡಿ ಉತ್ತರ..!

May 11, 2019
7:46 PM

ನಿಂತಿಕಲ್ಲು : ಅಲೆಕ್ಕಾಡಿ – ಎಡಮಂಗಲ ಜಿಲ್ಲಾ ಪಂಚಾಯತ್ ರಸ್ತೆ ದುರಸ್ತಿ ಕಾರ್ಯ ನಡೆಯುತ್ತಿದೆ. ಕಾಮಗಾರಿ ಬಗ್ಗೆ ಸ್ಥಳಿಯ ಕೃಷಿಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿ ರಸ್ತೆ ಬದಿಯಲ್ಲಿ ರೋಲ್ ಸರಿಯಾಗಿ ಆಗಿಲ್ಲ ಹಾಗೂ ಗುಣಮಟ್ಟದ ಬಗ್ಗೆಯೂ ನಮಗೆ ಸಂದೇಹ ಇದೆ ಎಂದು ವಿಡಿಯೋ ಮಾಡಿದರು.

ಇದಕ್ಕೆ ಕೆಂಡಾಮಂಡಲರಾದ ಗುತ್ತಿಗೆದಾರರು ಹಾಗೂ ಅವರ ಜೊತೆ ಇದ್ದವರು ಗದರಿಸಿದ್ದೂ ಅಲ್ಲದೆ ನಾವು ಕಾಮಗಾರಿ ನಿಲ್ಲಿಸುತ್ತೇವೆ, ಗುಣಮಟ್ಟದ ಬಗ್ಗೆ ಮಾತನಾಡಲು ನಿಮ್ಮಲ್ಲೇನಿದೆ ದಾಖಲೆ ಎಂದು ಮರುಪ್ರಶ್ನಿಸಿದಾಗ, ನಮ್ಮ ತೆರಿಗೆ ಹಣ ಎಂದು ಮರುತ್ತರವನ್ನು ಸ್ಥಳೀಯರು ನೀಡಿದ್ದಾರೆ.

 

ಈ ಬಗ್ಗೆ “ಸುಳ್ಯನ್ಯೂಸ್.ಕಾಂ” ವತಿಯಿಂದ ಪಿ ಎಂ ಜಿ ಎಸ್ ವೈ ಇಂಜಿನಿಯರ್ ಅವರನ್ನು ಸಂಪರ್ಕಿಸಲು ನಡೆಸಿದ ಪ್ರಯತ್ನ ವಿಫಲವಾಗಿದೆ. ಹಲವು ಬಾರಿ ಕರೆ ಮಾಡಿದಾಗ ಸ್ವೀಕರಿಸಲಿಲ್ಲ.

 

ಚೌಕೀದಾರ್ ಎಂಬ ಶಬ್ದ ಇತ್ತೀಚೆಗಷ್ಟೇ ಹೆಚ್ಚು ಪರಿಚಯವಾಗಿದೆ. ಈಗ ಸ್ಥಳೀಯರು ಕಾಮಗಾರಿ ಗುಣಮಟ್ಟದ ಬಗ್ಗೆ ಚೌಕೀದಾರ್ ಆಗಿದ್ದಾರೆ. ಗುತ್ತಿಗೆದಾರ ಕಾಮಗಾರಿ ಮಾಡುವುದಿಲ್ಲ ಎಂದು ಗದರಿಸಿದ್ದು ಈ ವಿಡಿಯೋದಲ್ಲಿ ಕಾಣುತ್ತದೆ. ಈಗ  ಹೆಸರಿನ ಮುಂದೆ  ಚೌಕೀದಾರ ಎಂದು ಹಾಕಿದವರ ನಡೆ ಏನು ಎಂಬುದನ್ನು ಸಾರ್ವಜನಿಕರು ಕೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್
ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ
March 23, 2026
9:12 PM
by: ದ ರೂರಲ್ ಮಿರರ್.ಕಾಂ
ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!
March 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror