ಛಲವೊಂದೇ ಮುಖ್ಯ ಸಾಧನ: ಡಾ.ಹೆಚ್.ಜಿ.ಶ್ರೀಧರ್

July 2, 2019
9:00 AM

ಪುತ್ತೂರು: ಛಲವು ಪತ್ರಿಕೋದ್ಯಮಕ್ಕೆ ಇರಬೇಕಾದ ಮುಖ್ಯ ಸಾಧನವಾಗಿದೆ. ಅದು ಇದ್ದ ಪಕ್ಷದಲ್ಲಿ ತಾವು ಇದಕ್ಕೆ ಅರ್ಹರು ಮತ್ತು ಒಬ್ಬ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ್ ಹೇಳಿದರು.
ಅವರು ವಿವೇಕಾನಂದ ಕಾಲೇಜಿನ ಕಾಲೇಜಿನ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಮಣಿಕರ್ಣಿಕಾ ಮಾತುಗಾರರ ವೇದಿಕೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಆಗಮಿಸಿ ಮಾತನಾಡಿದರು.
ಪದವಿಪೂರ್ವ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಪ್ರಶ್ನೆ ಸಹಜ. ಆ ಪ್ರಶ್ನಗೆ ಉತ್ತರ ಕಂಡುಕೊಳ್ಳುವುದು ಮುಖ್ಯ ಎಂದರಲ್ಲದೆ ಪತ್ರಿಕೋದ್ಯಮ ಉತ್ತಮ ಅವಕಾಶ ಇರುವ ಒಂದು ವೇದಿಕೆ. ಒಬ್ಬ ವರದಿಗಾರನಿಗೆ ಭಾಷೆ, ಬರವಣಿಗೆ ಹಾಗೂ ಉಚ್ಛರಣಾ ಸ್ಪಷ್ಟತೆ ಮುಖ್ಯ ಎಂದರು. ಪತ್ರಿಕೋದ್ಯಮ ಆಯ್ಕೆ ಮಾಡಿದರೆ ತಮ್ಮ ಗುರಿಯನ್ನು ಸಾಧಿಸುವುದು ಕಷ್ಟಸಾಧ್ಯವಲ್ಲ. ಅಲ್ಲದೆ ಒಬ್ಬ ವಿದ್ಯಾರ್ಥಿಗೆ ಕಲಿಕೆಯ ಕುರಿತ ಸೆಳೆತ ಇರಬೇಕು ಎಂದು ಅಭಿಪ್ರಾಯಪಟ್ಟರು.
ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‍ಕುಮಾರ್ ಕಮ್ಮಜೆ ಮಾತನಾಡಿ, ತಮ್ಮ ಕಾರ್ಯದಿಂದ ಹಿಂಜರಿಯುವ ವಿದ್ಯಾರ್ಥಿಗಳು ಎಂದಿಗೂ ತಮ್ಮ ಗುರಿಯನ್ನು ತಲುಪಲು ಕಷ್ಟಸಾಧ್ಯ. ತಮ್ಮ ಪ್ರತಿಭೆಯನ್ನು ಹೊರತರುವುದಕ್ಕೆ ಪತ್ರಿಕೋದ್ಯಮ ಒಂದು ಉತ್ತಮ ವೇದಿಕೆಯಾಗಿದೆ. ಅಲ್ಲದೆ ಇಲ್ಲಿ ಮುಕ್ತ ಅವಕಾಶವಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಇನ್ನೋರ್ವ ಅತಿಥಿ ಆಂಗ್ಲ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಮಾತನಾಡಿ, ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿದ ಎಷ್ಟೋ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉದ್ಯೋಗದಲ್ಲಿ ಇದ್ದಾರೆ. ತಾವು ಆಯ್ದ ವಿಷಯವನ್ನು ನಾವು ಪ್ರೀತಿಸಿದರೆ ಅದು ಎಂದೂ ನಮ್ಮನ್ನು ಕೈ ಬಿಡಲಾರದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ ಪಿ. ಆರ್. ನಿಡ್ಪಳ್ಳಿ ಪ್ರಥಮ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ತೇಜಶ್ರೀ ವೆಂಕಟೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನಘಾ ಶಿವರಾಮ್ ಸ್ವಾಗತಿಸಿ, ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ರಾಮಕಿಶನ್ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror