Advertisement
ಸುದ್ದಿಗಳು

ಛಲವೊಂದೇ ಮುಖ್ಯ ಸಾಧನ: ಡಾ.ಹೆಚ್.ಜಿ.ಶ್ರೀಧರ್

Share

ಪುತ್ತೂರು: ಛಲವು ಪತ್ರಿಕೋದ್ಯಮಕ್ಕೆ ಇರಬೇಕಾದ ಮುಖ್ಯ ಸಾಧನವಾಗಿದೆ. ಅದು ಇದ್ದ ಪಕ್ಷದಲ್ಲಿ ತಾವು ಇದಕ್ಕೆ ಅರ್ಹರು ಮತ್ತು ಒಬ್ಬ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ವಿವೇಕಾನಂದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಹೆಚ್.ಜಿ. ಶ್ರೀಧರ್ ಹೇಳಿದರು.
ಅವರು ವಿವೇಕಾನಂದ ಕಾಲೇಜಿನ ಕಾಲೇಜಿನ ತೃತೀಯ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ಮಣಿಕರ್ಣಿಕಾ ಮಾತುಗಾರರ ವೇದಿಕೆಯಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಪರಿಚಯ ಕಾರ್ಯಕ್ರಮದಲ್ಲಿ ಅಭ್ಯಾಗತರಾಗಿ ಆಗಮಿಸಿ ಮಾತನಾಡಿದರು.
ಪದವಿಪೂರ್ವ ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಪ್ರಶ್ನೆ ಸಹಜ. ಆ ಪ್ರಶ್ನಗೆ ಉತ್ತರ ಕಂಡುಕೊಳ್ಳುವುದು ಮುಖ್ಯ ಎಂದರಲ್ಲದೆ ಪತ್ರಿಕೋದ್ಯಮ ಉತ್ತಮ ಅವಕಾಶ ಇರುವ ಒಂದು ವೇದಿಕೆ. ಒಬ್ಬ ವರದಿಗಾರನಿಗೆ ಭಾಷೆ, ಬರವಣಿಗೆ ಹಾಗೂ ಉಚ್ಛರಣಾ ಸ್ಪಷ್ಟತೆ ಮುಖ್ಯ ಎಂದರು. ಪತ್ರಿಕೋದ್ಯಮ ಆಯ್ಕೆ ಮಾಡಿದರೆ ತಮ್ಮ ಗುರಿಯನ್ನು ಸಾಧಿಸುವುದು ಕಷ್ಟಸಾಧ್ಯವಲ್ಲ. ಅಲ್ಲದೆ ಒಬ್ಬ ವಿದ್ಯಾರ್ಥಿಗೆ ಕಲಿಕೆಯ ಕುರಿತ ಸೆಳೆತ ಇರಬೇಕು ಎಂದು ಅಭಿಪ್ರಾಯಪಟ್ಟರು.
ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್‍ಕುಮಾರ್ ಕಮ್ಮಜೆ ಮಾತನಾಡಿ, ತಮ್ಮ ಕಾರ್ಯದಿಂದ ಹಿಂಜರಿಯುವ ವಿದ್ಯಾರ್ಥಿಗಳು ಎಂದಿಗೂ ತಮ್ಮ ಗುರಿಯನ್ನು ತಲುಪಲು ಕಷ್ಟಸಾಧ್ಯ. ತಮ್ಮ ಪ್ರತಿಭೆಯನ್ನು ಹೊರತರುವುದಕ್ಕೆ ಪತ್ರಿಕೋದ್ಯಮ ಒಂದು ಉತ್ತಮ ವೇದಿಕೆಯಾಗಿದೆ. ಅಲ್ಲದೆ ಇಲ್ಲಿ ಮುಕ್ತ ಅವಕಾಶವಿದೆ ಎಂದು ತಿಳಿಸಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಇನ್ನೋರ್ವ ಅತಿಥಿ ಆಂಗ್ಲ ವಿಭಾಗದ ಉಪನ್ಯಾಸಕ ಗಣೇಶ್ ಪ್ರಸಾದ್ ಮಾತನಾಡಿ, ಈ ವಿದ್ಯಾಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮುಗಿಸಿದ ಎಷ್ಟೋ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉದ್ಯೋಗದಲ್ಲಿ ಇದ್ದಾರೆ. ತಾವು ಆಯ್ದ ವಿಷಯವನ್ನು ನಾವು ಪ್ರೀತಿಸಿದರೆ ಅದು ಎಂದೂ ನಮ್ಮನ್ನು ಕೈ ಬಿಡಲಾರದು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಭವ್ಯಾ ಪಿ. ಆರ್. ನಿಡ್ಪಳ್ಳಿ ಪ್ರಥಮ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯದರ್ಶಿ ತೇಜಶ್ರೀ ವೆಂಕಟೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿನಿ ಅನಘಾ ಶಿವರಾಮ್ ಸ್ವಾಗತಿಸಿ, ವಿದ್ಯಾರ್ಥಿನಿ ದೀಕ್ಷಿತಾ ವಂದಿಸಿದರು. ರಾಮಕಿಶನ್ ಕೆ.ವಿ. ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

6 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

11 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago