ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆ ಆಗಾಗ ನೋಡಿತು. ಆದರೆ ಮತ್ತೆ ಮತ್ತೆ ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿತು. ಕೊನೆಗೆ ಬುಧವಾರ ಕೊನೆಯುಸಿರೆಳೆಯಿತು. ಕಾಡಾನೆ ಬಾಳುಗೋಡಿನ ಕೃಷಿಕರಿಗೆ ನಿತ್ಯವೂ ಕಾಟ ಕೊಡುತ್ತಿದ್ದರೂ ಜನ ಹೇಳುವ ಮಾತು, ಛೇ… ಆನೆ ಸತ್ತಿತಲ್ಲ ಮಾರಾಯ್ರೆ ಎಂದು ಬೇಸರಿಸುತ್ತಾರೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆಯ ಸಿಬಂದಿಗಳ ಗಮನಕ್ಕೆ ಬಂದು ಪರಿಶೀಲನೆ ಮಾಡಿದಾಗ ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿತ್ತು. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿತ್ತು. ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿತ್ತು. ನಂತರ ಅರಿವಳಿಕೆ ನೀಡಿ ಚಿಕಿತ್ಸೆ ನೀಡಲಾಯಿತು.
ಆ ಬಳಿಕ ಕೊಂಚ ಸುಧಾರಣೆ ಕಂಡಿತು. ಆದರೆ ಮತ್ತೆ ಕಾಡಾನೆಗಳು ನಡುವೆ ಕಾದಾಟ ನಡೆಯಿತು. ಹೀಗಾಗಿ ಮತ್ತೆ ಆನೆ ಗಾಯಗೊಂಡು ಊರಿನ ಹತ್ತಿರ ಬರತೊಡಗಿತು. ಜನರ ಪ್ರೀತಿ ಹೆಚ್ಚಾಯಿತು. ಬೈನೆ ಸೇರಿದಂತೆ ಆಹಾರ ಕೊಡಲು ಆರಂಭಿಸಿದರು. ಬಳಿಕ ಹಾಗೆಯೇ ಆರೋಗ್ಯಗೊಂಡು ಕಾಡಿನ ಕಡೆಗೆ ಹೆಜ್ಜೆ ಹಾಕಿತು. ಮತ್ತೆ ಕಾಡಾನಗೆಳ ನಡುವೆ ಕಾದಾಟವಾಯಿತು. ಈಚೆಗೆ ಕೆಲವು ದಿನಗಳಿಂದ ಕಾಡಿನ ಕಡೆಗೆ ಯಾರೂ ಹೋಗಿರಲಿಲ್ಲ. ಬುಧವಾರ ಆನೆ ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂತು. ಊರ ಮಂದಿ ವಿಷಾದ ವ್ಯಕ್ತಪಡಿಸುತ್ತಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…