ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆ ಆಗಾಗ ನೋಡಿತು. ಆದರೆ ಮತ್ತೆ ಮತ್ತೆ ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿತು. ಕೊನೆಗೆ ಬುಧವಾರ ಕೊನೆಯುಸಿರೆಳೆಯಿತು. ಕಾಡಾನೆ ಬಾಳುಗೋಡಿನ ಕೃಷಿಕರಿಗೆ ನಿತ್ಯವೂ ಕಾಟ ಕೊಡುತ್ತಿದ್ದರೂ ಜನ ಹೇಳುವ ಮಾತು, ಛೇ… ಆನೆ ಸತ್ತಿತಲ್ಲ ಮಾರಾಯ್ರೆ ಎಂದು ಬೇಸರಿಸುತ್ತಾರೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆಯ ಸಿಬಂದಿಗಳ ಗಮನಕ್ಕೆ ಬಂದು ಪರಿಶೀಲನೆ ಮಾಡಿದಾಗ ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿತ್ತು. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿತ್ತು. ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿತ್ತು. ನಂತರ ಅರಿವಳಿಕೆ ನೀಡಿ ಚಿಕಿತ್ಸೆ ನೀಡಲಾಯಿತು.
ಆ ಬಳಿಕ ಕೊಂಚ ಸುಧಾರಣೆ ಕಂಡಿತು. ಆದರೆ ಮತ್ತೆ ಕಾಡಾನೆಗಳು ನಡುವೆ ಕಾದಾಟ ನಡೆಯಿತು. ಹೀಗಾಗಿ ಮತ್ತೆ ಆನೆ ಗಾಯಗೊಂಡು ಊರಿನ ಹತ್ತಿರ ಬರತೊಡಗಿತು. ಜನರ ಪ್ರೀತಿ ಹೆಚ್ಚಾಯಿತು. ಬೈನೆ ಸೇರಿದಂತೆ ಆಹಾರ ಕೊಡಲು ಆರಂಭಿಸಿದರು. ಬಳಿಕ ಹಾಗೆಯೇ ಆರೋಗ್ಯಗೊಂಡು ಕಾಡಿನ ಕಡೆಗೆ ಹೆಜ್ಜೆ ಹಾಕಿತು. ಮತ್ತೆ ಕಾಡಾನಗೆಳ ನಡುವೆ ಕಾದಾಟವಾಯಿತು. ಈಚೆಗೆ ಕೆಲವು ದಿನಗಳಿಂದ ಕಾಡಿನ ಕಡೆಗೆ ಯಾರೂ ಹೋಗಿರಲಿಲ್ಲ. ಬುಧವಾರ ಆನೆ ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂತು. ಊರ ಮಂದಿ ವಿಷಾದ ವ್ಯಕ್ತಪಡಿಸುತ್ತಾರೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…