ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆ ಆಗಾಗ ನೋಡಿತು. ಆದರೆ ಮತ್ತೆ ಮತ್ತೆ ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿತು. ಕೊನೆಗೆ ಬುಧವಾರ ಕೊನೆಯುಸಿರೆಳೆಯಿತು. ಕಾಡಾನೆ ಬಾಳುಗೋಡಿನ ಕೃಷಿಕರಿಗೆ ನಿತ್ಯವೂ ಕಾಟ ಕೊಡುತ್ತಿದ್ದರೂ ಜನ ಹೇಳುವ ಮಾತು, ಛೇ… ಆನೆ ಸತ್ತಿತಲ್ಲ ಮಾರಾಯ್ರೆ ಎಂದು ಬೇಸರಿಸುತ್ತಾರೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆಯ ಸಿಬಂದಿಗಳ ಗಮನಕ್ಕೆ ಬಂದು ಪರಿಶೀಲನೆ ಮಾಡಿದಾಗ ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿತ್ತು. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿತ್ತು. ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿತ್ತು. ನಂತರ ಅರಿವಳಿಕೆ ನೀಡಿ ಚಿಕಿತ್ಸೆ ನೀಡಲಾಯಿತು.
ಆ ಬಳಿಕ ಕೊಂಚ ಸುಧಾರಣೆ ಕಂಡಿತು. ಆದರೆ ಮತ್ತೆ ಕಾಡಾನೆಗಳು ನಡುವೆ ಕಾದಾಟ ನಡೆಯಿತು. ಹೀಗಾಗಿ ಮತ್ತೆ ಆನೆ ಗಾಯಗೊಂಡು ಊರಿನ ಹತ್ತಿರ ಬರತೊಡಗಿತು. ಜನರ ಪ್ರೀತಿ ಹೆಚ್ಚಾಯಿತು. ಬೈನೆ ಸೇರಿದಂತೆ ಆಹಾರ ಕೊಡಲು ಆರಂಭಿಸಿದರು. ಬಳಿಕ ಹಾಗೆಯೇ ಆರೋಗ್ಯಗೊಂಡು ಕಾಡಿನ ಕಡೆಗೆ ಹೆಜ್ಜೆ ಹಾಕಿತು. ಮತ್ತೆ ಕಾಡಾನಗೆಳ ನಡುವೆ ಕಾದಾಟವಾಯಿತು. ಈಚೆಗೆ ಕೆಲವು ದಿನಗಳಿಂದ ಕಾಡಿನ ಕಡೆಗೆ ಯಾರೂ ಹೋಗಿರಲಿಲ್ಲ. ಬುಧವಾರ ಆನೆ ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂತು. ಊರ ಮಂದಿ ವಿಷಾದ ವ್ಯಕ್ತಪಡಿಸುತ್ತಾರೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…