ಬಾಳುಗೋಡು: ಬಾಳುಗೋಡು ಮೀಸಲು ಅರಣ್ಯದೊಳಗಿನ ಕಾಡಿನಲ್ಲಿ ಕಾಡಾನೆಯೊಂದು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ನಂತರ ಚಿಕಿತ್ಸೆ ನಡೆಯಿತು. ದಿನವೂ ಜನ ನೋಡಿ ಬಂದರು. ಬೈನೆ ಹಾಕಿದರು. ಬದುಕಿಸುವ ಪ್ರಯತ್ನ ಮಾಡಿದರು. ಅರಣ್ಯ ಇಲಾಖೆ ಆಗಾಗ ನೋಡಿತು. ಆದರೆ ಮತ್ತೆ ಮತ್ತೆ ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿತು. ಕೊನೆಗೆ ಬುಧವಾರ ಕೊನೆಯುಸಿರೆಳೆಯಿತು. ಕಾಡಾನೆ ಬಾಳುಗೋಡಿನ ಕೃಷಿಕರಿಗೆ ನಿತ್ಯವೂ ಕಾಟ ಕೊಡುತ್ತಿದ್ದರೂ ಜನ ಹೇಳುವ ಮಾತು, ಛೇ… ಆನೆ ಸತ್ತಿತಲ್ಲ ಮಾರಾಯ್ರೆ ಎಂದು ಬೇಸರಿಸುತ್ತಾರೆ.
ಬಾಳುಗೋಡು ಗ್ರಾಮದ ಪದಕ ಮಿತ್ತಡ್ಕ ನಿವಾಸಿಗಳಿಬ್ಬರು ಕಾಡಿನತ್ತ ತೆರಳಿದಾಗ ಗಾಯಗೊಂಡ ಆನೆ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆಯ ಸಿಬಂದಿಗಳ ಗಮನಕ್ಕೆ ಬಂದು ಪರಿಶೀಲನೆ ಮಾಡಿದಾಗ ಆನೆಯ ಮುಂಭಾಗದ ಕಾಲಿಗೆ ಏಟಾಗಿರುವುದು ಗಮನಕ್ಕೆ ಬಂದಿದೆ. ನೋವಿನಿಂದ ಬಳಲುತ್ತಿರುವ ಆನೆಯು ನೋವು ತಡೆಯಲಾರದೆ ಘೀಳಿಡುತ್ತಿತ್ತು. ಹತ್ತಿರಕ್ಕೆ ತೆರಳಿದರೆ ಮರವನ್ನು ಅಲ್ಲಾಡಿಸಿ ಗದರಿಸುತ್ತಿತ್ತು. ಸೊಂಡಿಲಿನಿಂದ ಸೊಪ್ಪು ಕಲ್ಲುಗಳನ್ನು ಎಸೆಯುತ್ತಿತ್ತು. ನಂತರ ಅರಿವಳಿಕೆ ನೀಡಿ ಚಿಕಿತ್ಸೆ ನೀಡಲಾಯಿತು.
ಆ ಬಳಿಕ ಕೊಂಚ ಸುಧಾರಣೆ ಕಂಡಿತು. ಆದರೆ ಮತ್ತೆ ಕಾಡಾನೆಗಳು ನಡುವೆ ಕಾದಾಟ ನಡೆಯಿತು. ಹೀಗಾಗಿ ಮತ್ತೆ ಆನೆ ಗಾಯಗೊಂಡು ಊರಿನ ಹತ್ತಿರ ಬರತೊಡಗಿತು. ಜನರ ಪ್ರೀತಿ ಹೆಚ್ಚಾಯಿತು. ಬೈನೆ ಸೇರಿದಂತೆ ಆಹಾರ ಕೊಡಲು ಆರಂಭಿಸಿದರು. ಬಳಿಕ ಹಾಗೆಯೇ ಆರೋಗ್ಯಗೊಂಡು ಕಾಡಿನ ಕಡೆಗೆ ಹೆಜ್ಜೆ ಹಾಕಿತು. ಮತ್ತೆ ಕಾಡಾನಗೆಳ ನಡುವೆ ಕಾದಾಟವಾಯಿತು. ಈಚೆಗೆ ಕೆಲವು ದಿನಗಳಿಂದ ಕಾಡಿನ ಕಡೆಗೆ ಯಾರೂ ಹೋಗಿರಲಿಲ್ಲ. ಬುಧವಾರ ಆನೆ ಸಾವಿಗೀಡಾದ ಸ್ಥಿತಿಯಲ್ಲಿ ಕಂಡುಬಂತು. ಊರ ಮಂದಿ ವಿಷಾದ ವ್ಯಕ್ತಪಡಿಸುತ್ತಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…