Advertisement
ಧಾರ್ಮಿಕ

ಜಗತ್ತಿನ ಕತ್ತಲು ಕಳೆಯಲಿ – ಶ್ರೀರಾಘವೇಶ್ವರ ಶ್ರೀ

Share

ಗೋಕರ್ಣ: ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ 27ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಪೂಜ್ಯರು ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮೆ. ಶಾರ್ವರಿ ಎಂದರೆ ಕತ್ತಲು, ಪೂರ್ಣಿಮೆ ಎಂದರೆ ಬೆಳಕು. ಕತ್ತಲೆಯ ಮಧ್ಯೆ ಬೆಳಗುವಂತಹ ಬೆಳಕು. ಸೂರ್ಯನ ಬೆಳಕಿನ ತಾಪ, ಧಗೆಯನ್ನು ಉಂಟು ಮಾಡುತ್ತದೆ. ಆದರೆ ಪೂರ್ಣಮಿಯ ಬೆಳಕು ತಂಪು ನೀಡುತ್ತದೆ. ಶಾರ್ವರಿ ಗುರುಪೂರ್ಣಿಮೆ ಎಂದರೆ ಗುರು ತಂದ ಬೆಳಕಾಗಿದೆ ಎಂದರು.
ಭಾರತದಲ್ಲಿ ಉಂಟಾದ ಜ್ಞಾನ ಪ್ರಕಾಶ ಪ್ರಪಂಚದಲ್ಲೆಲ್ಲೂ ಆಗಿಲ್ಲ. ಇಂತಹ ದೊಡ್ಡ ಜ್ಞಾನಧನದ ವಾರಸುದಾರರು ನಾವಾಗಿದ್ದು, ಎಲ್ಲವನ್ನೂ ಇವತ್ತು ಕಳೆದುಕೊಂಡಿದ್ದೇವೆ. ದೇಶ ಜ್ಞಾನವನ್ನೆಲ್ಲಾ ಕಳೆದುಕೊಂಡ ಕಾರಣ ಕತ್ತಲು ದೇಶಕ್ಕೆ ಆವರಿಸಿದೆ. ಈ ಕತ್ತಲೆಯನ್ನು ನಿವಾರಿಸಲು ಗುರುಪೂರ್ಣಿಮೆಯೇ ಬೇಕಾಗಿದೆ ಎಂದು ಹೇಳಿದರು.

ಒಂದು ವಿದ್ಯಾ ಪೀಠ ಬೇಕಾಗಿದೆ. ಈ ಚಾತುರ್ಮಾಸ್ಯದ ಉದ್ದೇಶವೇ ವಿದ್ಯೆ. ವಿದ್ಯೆ ಉಳಿಯಬೇಕು, ವಿದ್ಯೆ ಬೆಳೆಯಬೇಕು, ವಿದ್ಯೆ ಬೆಳಗಬೇಕು, ಮತ್ತೊಮ್ಮೆ ವಿದ್ಯೆಯ ಪುನಪ್ರತಿಷ್ಠಾಪನೆ ಆಗಬೇಕಾಗಿದೆ ಎಂಬ ಕಾರಣಕ್ಕೆ ಒಂದು ವಿಶ್ವ ವಿದ್ಯಾ ಪೀಠ, ಐದು ಗುರುಕುಲಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈಮೂಲಕ ದೇಶದ ಕತ್ತಲನ್ನು ದೂರ ಮಾಡುವ ಕಾರ್ಯ ಮಾಡಲಾಗುತ್ತಿದೆ ಎಂದರು.
ವ್ಯಾಧಿ ತಂದ ಕಷ್ಟ, ವ್ಯಾಧಿ ತಂದ ನಷ್ಟ, ಯುದ್ಧ ಭೀತಿ ಈ ಮುಬ್ಬಗೆಯ ಕಷ್ಟದಲ್ಲಿ ಕತ್ತಲೆಯಲ್ಲಿ ದೇಶ ಇರುವ ಹೊತ್ತು. ದೇಶಕ್ಕೆ ಬಂದ ಕತ್ತಲೆ ನಿವಾರಣೆಯಾಗಲಿ, ದೇಶ ಬೆಳಕಾಗಲಿ, ದೇಶಕ್ಕೆ ಒಳಿತಾಗಲಿ ಎಂದು ಶಂಕರಾಚಾರ್ಯ ಪರಂಪರೆಯ ಪೀಠ ಹಾರೈಸುತ್ತದೆ ಎಂದರು.

ಶನಿವಾರ ಸಾಯಂಕಾಲ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಭಾನುವಾರ ಬೆಳಗ್ಗೆ ಶ್ರೀಕರಾರ್ಚಿತ ಪೂಜೆ, ವ್ಯಾಸಪೂಜೆ, ಭಿಕ್ಷಾ ಸೇವೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

7 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

8 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

8 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

22 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

23 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

2 days ago