ಗೋಕರ್ಣ: ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.
ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ 27ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಪೂಜ್ಯರು ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮೆ. ಶಾರ್ವರಿ ಎಂದರೆ ಕತ್ತಲು, ಪೂರ್ಣಿಮೆ ಎಂದರೆ ಬೆಳಕು. ಕತ್ತಲೆಯ ಮಧ್ಯೆ ಬೆಳಗುವಂತಹ ಬೆಳಕು. ಸೂರ್ಯನ ಬೆಳಕಿನ ತಾಪ, ಧಗೆಯನ್ನು ಉಂಟು ಮಾಡುತ್ತದೆ. ಆದರೆ ಪೂರ್ಣಮಿಯ ಬೆಳಕು ತಂಪು ನೀಡುತ್ತದೆ. ಶಾರ್ವರಿ ಗುರುಪೂರ್ಣಿಮೆ ಎಂದರೆ ಗುರು ತಂದ ಬೆಳಕಾಗಿದೆ ಎಂದರು.
ಭಾರತದಲ್ಲಿ ಉಂಟಾದ ಜ್ಞಾನ ಪ್ರಕಾಶ ಪ್ರಪಂಚದಲ್ಲೆಲ್ಲೂ ಆಗಿಲ್ಲ. ಇಂತಹ ದೊಡ್ಡ ಜ್ಞಾನಧನದ ವಾರಸುದಾರರು ನಾವಾಗಿದ್ದು, ಎಲ್ಲವನ್ನೂ ಇವತ್ತು ಕಳೆದುಕೊಂಡಿದ್ದೇವೆ. ದೇಶ ಜ್ಞಾನವನ್ನೆಲ್ಲಾ ಕಳೆದುಕೊಂಡ ಕಾರಣ ಕತ್ತಲು ದೇಶಕ್ಕೆ ಆವರಿಸಿದೆ. ಈ ಕತ್ತಲೆಯನ್ನು ನಿವಾರಿಸಲು ಗುರುಪೂರ್ಣಿಮೆಯೇ ಬೇಕಾಗಿದೆ ಎಂದು ಹೇಳಿದರು.
ಒಂದು ವಿದ್ಯಾ ಪೀಠ ಬೇಕಾಗಿದೆ. ಈ ಚಾತುರ್ಮಾಸ್ಯದ ಉದ್ದೇಶವೇ ವಿದ್ಯೆ. ವಿದ್ಯೆ ಉಳಿಯಬೇಕು, ವಿದ್ಯೆ ಬೆಳೆಯಬೇಕು, ವಿದ್ಯೆ ಬೆಳಗಬೇಕು, ಮತ್ತೊಮ್ಮೆ ವಿದ್ಯೆಯ ಪುನಪ್ರತಿಷ್ಠಾಪನೆ ಆಗಬೇಕಾಗಿದೆ ಎಂಬ ಕಾರಣಕ್ಕೆ ಒಂದು ವಿಶ್ವ ವಿದ್ಯಾ ಪೀಠ, ಐದು ಗುರುಕುಲಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈಮೂಲಕ ದೇಶದ ಕತ್ತಲನ್ನು ದೂರ ಮಾಡುವ ಕಾರ್ಯ ಮಾಡಲಾಗುತ್ತಿದೆ ಎಂದರು.
ವ್ಯಾಧಿ ತಂದ ಕಷ್ಟ, ವ್ಯಾಧಿ ತಂದ ನಷ್ಟ, ಯುದ್ಧ ಭೀತಿ ಈ ಮುಬ್ಬಗೆಯ ಕಷ್ಟದಲ್ಲಿ ಕತ್ತಲೆಯಲ್ಲಿ ದೇಶ ಇರುವ ಹೊತ್ತು. ದೇಶಕ್ಕೆ ಬಂದ ಕತ್ತಲೆ ನಿವಾರಣೆಯಾಗಲಿ, ದೇಶ ಬೆಳಕಾಗಲಿ, ದೇಶಕ್ಕೆ ಒಳಿತಾಗಲಿ ಎಂದು ಶಂಕರಾಚಾರ್ಯ ಪರಂಪರೆಯ ಪೀಠ ಹಾರೈಸುತ್ತದೆ ಎಂದರು.
ಶನಿವಾರ ಸಾಯಂಕಾಲ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಭಾನುವಾರ ಬೆಳಗ್ಗೆ ಶ್ರೀಕರಾರ್ಚಿತ ಪೂಜೆ, ವ್ಯಾಸಪೂಜೆ, ಭಿಕ್ಷಾ ಸೇವೆ ನಡೆಯಿತು.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…