Advertisement
ಧಾರ್ಮಿಕ

ಜಗತ್ತಿನ ಕತ್ತಲು ಕಳೆಯಲಿ – ಶ್ರೀರಾಘವೇಶ್ವರ ಶ್ರೀ

Share

ಗೋಕರ್ಣ: ಜಗತ್ತನ್ನು ಮಾರಕ ವ್ಯಾಧಿ ಪೀಡಿಸುತ್ತಿದ್ದು, ಇಡೀ ಜಗತ್ತೇ ಕಂಗಾಲಾಗಿದೆ. ನಿಜಕ್ಕೂ ಜಗತ್ತು ಕತ್ತಲಲ್ಲಿದೆ, ಕಷ್ಟದಲ್ಲಿದೆ, ಬೆಳಕು ಸಿಗುತ್ತಿಲ್ಲ. ಜಗತ್ತಿನ ಅಮಾವಾಸ್ಯೆ ಪೂರ್ಣಿಮೆಯಾಗಿ ಪರಿವರ್ತನೆಯಾಗಲಿ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು.

ಶ್ರೀಕ್ಷೇತ್ರ ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿದ್ಯಾಪೀಠದ ಪರಿಸರದಲ್ಲಿ 27ನೇ ಚಾತುರ್ಮಾಸ್ಯದ ವ್ಯಾಸಪೂಜೆ ನೆರವೇರಿಸಿ ಪೂಜ್ಯರು ಆಶೀರ್ವಚನ ನೀಡಿದರು. ಅಂತರಂಗದಲ್ಲಿ ಜ್ಞಾನದ ಬೆಳಕು ಹಾಗೂ ಚೈತನ್ಯದ ತಂಪನ್ನು ಉಂಟುಮಾಡುವಂತಹದ್ದು ಗುರುಪೂರ್ಣಿಮೆ. ಶಾರ್ವರಿ ಎಂದರೆ ಕತ್ತಲು, ಪೂರ್ಣಿಮೆ ಎಂದರೆ ಬೆಳಕು. ಕತ್ತಲೆಯ ಮಧ್ಯೆ ಬೆಳಗುವಂತಹ ಬೆಳಕು. ಸೂರ್ಯನ ಬೆಳಕಿನ ತಾಪ, ಧಗೆಯನ್ನು ಉಂಟು ಮಾಡುತ್ತದೆ. ಆದರೆ ಪೂರ್ಣಮಿಯ ಬೆಳಕು ತಂಪು ನೀಡುತ್ತದೆ. ಶಾರ್ವರಿ ಗುರುಪೂರ್ಣಿಮೆ ಎಂದರೆ ಗುರು ತಂದ ಬೆಳಕಾಗಿದೆ ಎಂದರು.
ಭಾರತದಲ್ಲಿ ಉಂಟಾದ ಜ್ಞಾನ ಪ್ರಕಾಶ ಪ್ರಪಂಚದಲ್ಲೆಲ್ಲೂ ಆಗಿಲ್ಲ. ಇಂತಹ ದೊಡ್ಡ ಜ್ಞಾನಧನದ ವಾರಸುದಾರರು ನಾವಾಗಿದ್ದು, ಎಲ್ಲವನ್ನೂ ಇವತ್ತು ಕಳೆದುಕೊಂಡಿದ್ದೇವೆ. ದೇಶ ಜ್ಞಾನವನ್ನೆಲ್ಲಾ ಕಳೆದುಕೊಂಡ ಕಾರಣ ಕತ್ತಲು ದೇಶಕ್ಕೆ ಆವರಿಸಿದೆ. ಈ ಕತ್ತಲೆಯನ್ನು ನಿವಾರಿಸಲು ಗುರುಪೂರ್ಣಿಮೆಯೇ ಬೇಕಾಗಿದೆ ಎಂದು ಹೇಳಿದರು.

ಒಂದು ವಿದ್ಯಾ ಪೀಠ ಬೇಕಾಗಿದೆ. ಈ ಚಾತುರ್ಮಾಸ್ಯದ ಉದ್ದೇಶವೇ ವಿದ್ಯೆ. ವಿದ್ಯೆ ಉಳಿಯಬೇಕು, ವಿದ್ಯೆ ಬೆಳೆಯಬೇಕು, ವಿದ್ಯೆ ಬೆಳಗಬೇಕು, ಮತ್ತೊಮ್ಮೆ ವಿದ್ಯೆಯ ಪುನಪ್ರತಿಷ್ಠಾಪನೆ ಆಗಬೇಕಾಗಿದೆ ಎಂಬ ಕಾರಣಕ್ಕೆ ಒಂದು ವಿಶ್ವ ವಿದ್ಯಾ ಪೀಠ, ಐದು ಗುರುಕುಲಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಈಮೂಲಕ ದೇಶದ ಕತ್ತಲನ್ನು ದೂರ ಮಾಡುವ ಕಾರ್ಯ ಮಾಡಲಾಗುತ್ತಿದೆ ಎಂದರು.
ವ್ಯಾಧಿ ತಂದ ಕಷ್ಟ, ವ್ಯಾಧಿ ತಂದ ನಷ್ಟ, ಯುದ್ಧ ಭೀತಿ ಈ ಮುಬ್ಬಗೆಯ ಕಷ್ಟದಲ್ಲಿ ಕತ್ತಲೆಯಲ್ಲಿ ದೇಶ ಇರುವ ಹೊತ್ತು. ದೇಶಕ್ಕೆ ಬಂದ ಕತ್ತಲೆ ನಿವಾರಣೆಯಾಗಲಿ, ದೇಶ ಬೆಳಕಾಗಲಿ, ದೇಶಕ್ಕೆ ಒಳಿತಾಗಲಿ ಎಂದು ಶಂಕರಾಚಾರ್ಯ ಪರಂಪರೆಯ ಪೀಠ ಹಾರೈಸುತ್ತದೆ ಎಂದರು.

ಶನಿವಾರ ಸಾಯಂಕಾಲ ಶ್ರೀಗಳವರ ಪುರಪ್ರವೇಶ ಕಾರ್ಯಕ್ರಮ ನಡೆಯಿತು. ಭಾನುವಾರ ಬೆಳಗ್ಗೆ ಶ್ರೀಕರಾರ್ಚಿತ ಪೂಜೆ, ವ್ಯಾಸಪೂಜೆ, ಭಿಕ್ಷಾ ಸೇವೆ ನಡೆಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

14 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

20 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago