Advertisement
ಸುದ್ದಿಗಳು

ಜನಪರ ವಿಶ್ವವಿದ್ಯಾಲಯ ನನ್ನ ಆಶಯ: ಕುಲಪತಿ ಪ್ರೊ.ಯಡಪಡಿತ್ತಾಯ

Share

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಜನರ ಪರವಾಗಿ ಕೆಲಸ ಮಾಡಲಿದೆ. ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಜನರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಸ್ ಯಡಪಡಿತ್ತಾಯ ಹೇಳಿದ್ದಾರೆ.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಎಸ್ಎಸ್ ಸಿಡಿಎಫ್ ಮಂಗಳೂರು ಪುರಭವನ ಆಯೋಜಿಸಿರುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಶೋಧ ಕರನಿಂಗ ಬರೆದಿರುವ ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಅವರ ಕರಿತಾದ ಎರಡು ಕೃತಿಗಳ ಲೋಕಾರ್ಪಣೆ ಮಾಡಲಾಯಿತು.

ಅರಿವು ನೀಡುವ ಯಾವುದೇ ಕಾರ್ಯಕ್ರಮಕ್ಕೂ ವಿಶ್ವವಿದ್ಯಾಲಯವು ಬೆಂಬಲಿಗನಾಗಿ ನಿಲ್ಲುತ್ತದೆ. ವಿಶ್ವವಿದ್ಯಾನಿಲಯವನ್ನು ವಿಭಿನ್ನವಾಗಿ ರೂಪಿಸಬೇಕು, ಇತರರಿಗಿಂತ ಭಿನ್ನವಾಗಿ ಕೆಲವಸ ಮಾಡಬೇಕು ಹಾಗೂ ಅದು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂಬುದು ತನ್ನ ಮೂಲ ಆಶಯವಾಗಿದೆ ಎಂದು ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದರು.
ಎಸ್ಎಸ್ ಸಿಡಿಎಫ್ ಸಾಮಾಜಿಕ ಕಾಳಜಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಸಂಸ್ಥೆಯ ಮುಂದಿನ ಕೆಲಸ ಕಾರ್ಯ ಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಲೇಖಕಿ ಡಾ. ಯಶೋಧ ಕರನಿಂಗ, ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗಭೂಮಿ ನಟ ಇಂದುಶೇಖರ್ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಎಸ್ ಸಿಡಿಎಫ್ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಾಗೂ ನೋಟರಿ ಗಂಗಾಧರ್ ಉಳ್ಳಾಲ, ಸಾಮಾಜಿಕ ಕಾರ್ಯಕರ್ತೆ ಬಿ.ಕೆ. ಭಾಗೀರಥಿ ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

21 minutes ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

47 minutes ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

4 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

13 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

14 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

20 hours ago