Advertisement
ಸುದ್ದಿಗಳು

ಜನಪರ ವಿಶ್ವವಿದ್ಯಾಲಯ ನನ್ನ ಆಶಯ: ಕುಲಪತಿ ಪ್ರೊ.ಯಡಪಡಿತ್ತಾಯ

Share

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಜನರ ಪರವಾಗಿ ಕೆಲಸ ಮಾಡಲಿದೆ. ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಜನರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಸ್ ಯಡಪಡಿತ್ತಾಯ ಹೇಳಿದ್ದಾರೆ.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಎಸ್ಎಸ್ ಸಿಡಿಎಫ್ ಮಂಗಳೂರು ಪುರಭವನ ಆಯೋಜಿಸಿರುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಶೋಧ ಕರನಿಂಗ ಬರೆದಿರುವ ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಅವರ ಕರಿತಾದ ಎರಡು ಕೃತಿಗಳ ಲೋಕಾರ್ಪಣೆ ಮಾಡಲಾಯಿತು.

ಅರಿವು ನೀಡುವ ಯಾವುದೇ ಕಾರ್ಯಕ್ರಮಕ್ಕೂ ವಿಶ್ವವಿದ್ಯಾಲಯವು ಬೆಂಬಲಿಗನಾಗಿ ನಿಲ್ಲುತ್ತದೆ. ವಿಶ್ವವಿದ್ಯಾನಿಲಯವನ್ನು ವಿಭಿನ್ನವಾಗಿ ರೂಪಿಸಬೇಕು, ಇತರರಿಗಿಂತ ಭಿನ್ನವಾಗಿ ಕೆಲವಸ ಮಾಡಬೇಕು ಹಾಗೂ ಅದು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂಬುದು ತನ್ನ ಮೂಲ ಆಶಯವಾಗಿದೆ ಎಂದು ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದರು.
ಎಸ್ಎಸ್ ಸಿಡಿಎಫ್ ಸಾಮಾಜಿಕ ಕಾಳಜಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಸಂಸ್ಥೆಯ ಮುಂದಿನ ಕೆಲಸ ಕಾರ್ಯ ಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಲೇಖಕಿ ಡಾ. ಯಶೋಧ ಕರನಿಂಗ, ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗಭೂಮಿ ನಟ ಇಂದುಶೇಖರ್ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಎಸ್ ಸಿಡಿಎಫ್ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಾಗೂ ನೋಟರಿ ಗಂಗಾಧರ್ ಉಳ್ಳಾಲ, ಸಾಮಾಜಿಕ ಕಾರ್ಯಕರ್ತೆ ಬಿ.ಕೆ. ಭಾಗೀರಥಿ ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

15 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

24 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago