Advertisement
ಸುದ್ದಿಗಳು

ಜನಪರ ವಿಶ್ವವಿದ್ಯಾಲಯ ನನ್ನ ಆಶಯ: ಕುಲಪತಿ ಪ್ರೊ.ಯಡಪಡಿತ್ತಾಯ

Share

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಜನರ ಪರವಾಗಿ ಕೆಲಸ ಮಾಡಲಿದೆ. ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಜನರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಸ್ ಯಡಪಡಿತ್ತಾಯ ಹೇಳಿದ್ದಾರೆ.

ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಎಸ್ಎಸ್ ಸಿಡಿಎಫ್ ಮಂಗಳೂರು ಪುರಭವನ ಆಯೋಜಿಸಿರುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಶೋಧ ಕರನಿಂಗ ಬರೆದಿರುವ ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಅವರ ಕರಿತಾದ ಎರಡು ಕೃತಿಗಳ ಲೋಕಾರ್ಪಣೆ ಮಾಡಲಾಯಿತು.

ಅರಿವು ನೀಡುವ ಯಾವುದೇ ಕಾರ್ಯಕ್ರಮಕ್ಕೂ ವಿಶ್ವವಿದ್ಯಾಲಯವು ಬೆಂಬಲಿಗನಾಗಿ ನಿಲ್ಲುತ್ತದೆ. ವಿಶ್ವವಿದ್ಯಾನಿಲಯವನ್ನು ವಿಭಿನ್ನವಾಗಿ ರೂಪಿಸಬೇಕು, ಇತರರಿಗಿಂತ ಭಿನ್ನವಾಗಿ ಕೆಲವಸ ಮಾಡಬೇಕು ಹಾಗೂ ಅದು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂಬುದು ತನ್ನ ಮೂಲ ಆಶಯವಾಗಿದೆ ಎಂದು ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದರು.
ಎಸ್ಎಸ್ ಸಿಡಿಎಫ್ ಸಾಮಾಜಿಕ ಕಾಳಜಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಸಂಸ್ಥೆಯ ಮುಂದಿನ ಕೆಲಸ ಕಾರ್ಯ ಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.

ಲೇಖಕಿ ಡಾ. ಯಶೋಧ ಕರನಿಂಗ, ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗಭೂಮಿ ನಟ ಇಂದುಶೇಖರ್ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಎಸ್ ಸಿಡಿಎಫ್ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಾಗೂ ನೋಟರಿ ಗಂಗಾಧರ್ ಉಳ್ಳಾಲ, ಸಾಮಾಜಿಕ ಕಾರ್ಯಕರ್ತೆ ಬಿ.ಕೆ. ಭಾಗೀರಥಿ ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

3 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago