ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಜನರ ಪರವಾಗಿ ಕೆಲಸ ಮಾಡಲಿದೆ. ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಜನರ ಬೇಡಿಕೆಗಳಿಗೆ ಸ್ಪಂದಿಸಲಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ ಪಿ.ಎಸ್ ಯಡಪಡಿತ್ತಾಯ ಹೇಳಿದ್ದಾರೆ.
ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ಎಸ್ಎಸ್ ಸಿಡಿಎಫ್ ಮಂಗಳೂರು ಪುರಭವನ ಆಯೋಜಿಸಿರುವ ಮೂರು ದಿನಗಳ ಸಂಸ್ಕೃತಿ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಶೋಧ ಕರನಿಂಗ ಬರೆದಿರುವ ಪ್ರಸಾರ ಭಾರತಿಯ ಮಾಜಿ ಅಧ್ಯಕ್ಷೆ ಮೃಣಾಲ್ ಪಾಂಡೆ ಅವರ ಕರಿತಾದ ಎರಡು ಕೃತಿಗಳ ಲೋಕಾರ್ಪಣೆ ಮಾಡಲಾಯಿತು.
ಅರಿವು ನೀಡುವ ಯಾವುದೇ ಕಾರ್ಯಕ್ರಮಕ್ಕೂ ವಿಶ್ವವಿದ್ಯಾಲಯವು ಬೆಂಬಲಿಗನಾಗಿ ನಿಲ್ಲುತ್ತದೆ. ವಿಶ್ವವಿದ್ಯಾನಿಲಯವನ್ನು ವಿಭಿನ್ನವಾಗಿ ರೂಪಿಸಬೇಕು, ಇತರರಿಗಿಂತ ಭಿನ್ನವಾಗಿ ಕೆಲವಸ ಮಾಡಬೇಕು ಹಾಗೂ ಅದು ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂಬುದು ತನ್ನ ಮೂಲ ಆಶಯವಾಗಿದೆ ಎಂದು ಕುಲಪತಿ ಪ್ರೊ. ಯಡಪಡಿತ್ತಾಯ ಹೇಳಿದರು.
ಎಸ್ಎಸ್ ಸಿಡಿಎಫ್ ಸಾಮಾಜಿಕ ಕಾಳಜಿ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡುತ್ತಿದೆ. ಸಂಸ್ಥೆಯ ಮುಂದಿನ ಕೆಲಸ ಕಾರ್ಯ ಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದರು.
ಲೇಖಕಿ ಡಾ. ಯಶೋಧ ಕರನಿಂಗ, ಪತ್ರಕರ್ತ ಎಂ.ಎಂ.ಎ. ಶರೀಫ್ ಹಾಗೂ ರಂಗಭೂಮಿ ನಟ ಇಂದುಶೇಖರ್ ಯವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಎಸ್ಎಸ್ ಸಿಡಿಎಫ್ ಗಂಗಾಧರ್ ಗಾಂಧಿ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಹಾಗೂ ನೋಟರಿ ಗಂಗಾಧರ್ ಉಳ್ಳಾಲ, ಸಾಮಾಜಿಕ ಕಾರ್ಯಕರ್ತೆ ಬಿ.ಕೆ. ಭಾಗೀರಥಿ ಉಪಸ್ಥಿತರಿದ್ದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…