The Rural Mirror ಕಾಳಜಿ

ಜನಪ್ರತಿನಿಧಿಗಳ ಮಾತಿಗೂ ಕ್ಯಾರೇ ಎನ್ನದ ಇಲಾಖೆ : ಚಾರ್ಮಾತ ಬಳಿ ಪರದಾಡುತ್ತಿರುವ ಗ್ರಾಮಸ್ಥರು : ಪ್ರತಿಭಟನೆಗೆ ಸಿದ್ಧತೆ

Share

ನಾಲ್ಕೂರು ಗ್ರಾಮದ ನಡುಗಲ್ಲು ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ರಸ್ತೆಯಲ್ಲಿ ತಳಪಾಯ ತೆಗೆದು ವಿಳಂಬ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಲಾಮಕ್ಕಳು  ವೃದ್ಧರು ಸೇರಿದಂತೆ ಗ್ರಾಮಸ್ಥರು ಹೋಗಲು ರಸ್ತೆ ಹಾಗೂ ದಾರಿ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

Advertisement
Advertisement

ಗುತ್ತಿಗಾರು: ನಾಲ್ಕೂರು ಗ್ರಾಮದ ನಡುಗಲ್ಲು – ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ಸುಮಾರು 15 ಲಕ್ಷ ರೂಪಾಯಿ ಅನುದಾನವನ್ನು ಶಾಸಕ ಎಸ್ ಅಂಗಾರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕಾಮಗಾರಿ ಆರಂಭವಾಗಿತ್ತು. ಆದರೆ ಇದೀಗ ವಿಳಂಬವಾಗುತ್ತಿರುವ ಕಾರಣ ಗ್ರಾಮಸ್ಥರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಈ ಕಾಮಗಾರಿಯು ಪಿಡಬ್ಲ್ಯೂಡಿ  ಇಲಾಖೆಗೆ ಸಂಬಂಧಪಟ್ಟಿದ್ದು, ಟೆಂಡರು ಕೂಡಾ ಆಗಿ ಕೆಲಸ ಪ್ರಾರಂಭಿಸಲಾಗಿತ್ತು.  ರಸ್ತೆಯಿಂದ ಆ ಕಡೆಗೆ ಪರಿಶಿಷ್ಟ ಪಂಗಡ ಮತ್ತು ಇತರರು ಸೇರಿ 12 ಕ್ಕಿಂತಲೂ ಅಧಿಕ ಮನೆ ಇದ್ದು, ರಸ್ತೆಯಲ್ಲಿಯೇ ತಳಪಾಯವನ್ನು ಮಾಡಿ ಹೋದ ಗುತ್ತಿಗೆದಾರರು ಮತ್ತು ಪಿಡಬ್ಲ್ಯೂಡಿ ಇಲಾಖೆ ಈ ಭಾಗಕ್ಕೆ ಇನ್ನೂ ಬಾರದೇ ವಿಳಂಬ ಧೋರಣೆ ತಳೆದಿದೆ.

ರಸ್ತೆಯಲ್ಲಿಯೇ ತಳಪಾಯ ಮಾಡಿದ ಕಾರಣ ಆ ಭಾಗದ ಮನೆಯವರಿಗೆ, ಶಾಲಾಮಕ್ಕಳು ಮತ್ತು ವೃದ್ಧರಿಗೆ ಹೋಗಲು ರಸ್ತೆ ಹಾಗೂ ದಾರಿ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಪಿಡಬ್ಲ್ಯೂಡಿ  ಇಲಾಖೆಗೆ ಮತ್ತು ಗುತ್ತಿಗೆದಾರರಿಗೆ ಆ ಭಾಗದ ಜನಪ್ರತಿನಿಧಿಗಳು ಸಾಕಷ್ಟು ಬಾರಿ ದೂರವಾಣಿ ಕರೆಯ ಮೂಲಕ ತಿಳಿಸಿದ್ದರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಹೀಗಾಗಿ ತಕ್ಷಣವೇ ಕೆಲಸವನ್ನು ಪ್ರಾರಂಭಿಸದಿದ್ದಲ್ಲಿ ಪಿಡಬ್ಲ್ಯೂಡಿ  ಇಲಾಖೆಯ ಮುಂದೆ ಧರಣಿ ನಡೆಸಲು ಸಾರ್ವಜನಿಕರು ನಿರ್ಧರಿಸಿದ್ದಾರೆ.

 

Advertisement

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಈ 4 ರಾಶಿಗೆ ಒಂಟಿ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490

2 hours ago

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

5 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

5 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

5 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

14 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

14 hours ago