Advertisement
The Rural Mirror ಕಾಳಜಿ

ಜನಪ್ರತಿನಿಧಿಗಳ ಮಾತಿಗೂ ಕ್ಯಾರೇ ಎನ್ನದ ಇಲಾಖೆ : ಚಾರ್ಮಾತ ಬಳಿ ಪರದಾಡುತ್ತಿರುವ ಗ್ರಾಮಸ್ಥರು : ಪ್ರತಿಭಟನೆಗೆ ಸಿದ್ಧತೆ

Share

ನಾಲ್ಕೂರು ಗ್ರಾಮದ ನಡುಗಲ್ಲು ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ರಸ್ತೆಯಲ್ಲಿ ತಳಪಾಯ ತೆಗೆದು ವಿಳಂಬ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಲಾಮಕ್ಕಳು  ವೃದ್ಧರು ಸೇರಿದಂತೆ ಗ್ರಾಮಸ್ಥರು ಹೋಗಲು ರಸ್ತೆ ಹಾಗೂ ದಾರಿ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಗುತ್ತಿಗಾರು: ನಾಲ್ಕೂರು ಗ್ರಾಮದ ನಡುಗಲ್ಲು – ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ಸುಮಾರು 15 ಲಕ್ಷ ರೂಪಾಯಿ ಅನುದಾನವನ್ನು ಶಾಸಕ ಎಸ್ ಅಂಗಾರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕಾಮಗಾರಿ ಆರಂಭವಾಗಿತ್ತು. ಆದರೆ ಇದೀಗ ವಿಳಂಬವಾಗುತ್ತಿರುವ ಕಾರಣ ಗ್ರಾಮಸ್ಥರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಈ ಕಾಮಗಾರಿಯು ಪಿಡಬ್ಲ್ಯೂಡಿ  ಇಲಾಖೆಗೆ ಸಂಬಂಧಪಟ್ಟಿದ್ದು, ಟೆಂಡರು ಕೂಡಾ ಆಗಿ ಕೆಲಸ ಪ್ರಾರಂಭಿಸಲಾಗಿತ್ತು.  ರಸ್ತೆಯಿಂದ ಆ ಕಡೆಗೆ ಪರಿಶಿಷ್ಟ ಪಂಗಡ ಮತ್ತು ಇತರರು ಸೇರಿ 12 ಕ್ಕಿಂತಲೂ ಅಧಿಕ ಮನೆ ಇದ್ದು, ರಸ್ತೆಯಲ್ಲಿಯೇ ತಳಪಾಯವನ್ನು ಮಾಡಿ ಹೋದ ಗುತ್ತಿಗೆದಾರರು ಮತ್ತು ಪಿಡಬ್ಲ್ಯೂಡಿ ಇಲಾಖೆ ಈ ಭಾಗಕ್ಕೆ ಇನ್ನೂ ಬಾರದೇ ವಿಳಂಬ ಧೋರಣೆ ತಳೆದಿದೆ.

ರಸ್ತೆಯಲ್ಲಿಯೇ ತಳಪಾಯ ಮಾಡಿದ ಕಾರಣ ಆ ಭಾಗದ ಮನೆಯವರಿಗೆ, ಶಾಲಾಮಕ್ಕಳು ಮತ್ತು ವೃದ್ಧರಿಗೆ ಹೋಗಲು ರಸ್ತೆ ಹಾಗೂ ದಾರಿ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಪಿಡಬ್ಲ್ಯೂಡಿ  ಇಲಾಖೆಗೆ ಮತ್ತು ಗುತ್ತಿಗೆದಾರರಿಗೆ ಆ ಭಾಗದ ಜನಪ್ರತಿನಿಧಿಗಳು ಸಾಕಷ್ಟು ಬಾರಿ ದೂರವಾಣಿ ಕರೆಯ ಮೂಲಕ ತಿಳಿಸಿದ್ದರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಹೀಗಾಗಿ ತಕ್ಷಣವೇ ಕೆಲಸವನ್ನು ಪ್ರಾರಂಭಿಸದಿದ್ದಲ್ಲಿ ಪಿಡಬ್ಲ್ಯೂಡಿ  ಇಲಾಖೆಯ ಮುಂದೆ ಧರಣಿ ನಡೆಸಲು ಸಾರ್ವಜನಿಕರು ನಿರ್ಧರಿಸಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago