ನಾಲ್ಕೂರು ಗ್ರಾಮದ ನಡುಗಲ್ಲು ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ರಸ್ತೆಯಲ್ಲಿ ತಳಪಾಯ ತೆಗೆದು ವಿಳಂಬ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಶಾಲಾಮಕ್ಕಳು ವೃದ್ಧರು ಸೇರಿದಂತೆ ಗ್ರಾಮಸ್ಥರು ಹೋಗಲು ರಸ್ತೆ ಹಾಗೂ ದಾರಿ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಗುತ್ತಿಗಾರು: ನಾಲ್ಕೂರು ಗ್ರಾಮದ ನಡುಗಲ್ಲು – ಚಾರ್ಮತ ಸಂಪರ್ಕಿಸುವ ನೆಲ್ಲಿಪುಣಿ ಎಂಬಲ್ಲಿ ಕಾಲುಸಂಕ ನಿರ್ಮಾಣಕ್ಕೆ ಸುಮಾರು 15 ಲಕ್ಷ ರೂಪಾಯಿ ಅನುದಾನವನ್ನು ಶಾಸಕ ಎಸ್ ಅಂಗಾರ ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ ಕಾಮಗಾರಿ ಆರಂಭವಾಗಿತ್ತು. ಆದರೆ ಇದೀಗ ವಿಳಂಬವಾಗುತ್ತಿರುವ ಕಾರಣ ಗ್ರಾಮಸ್ಥರು ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಈ ಕಾಮಗಾರಿಯು ಪಿಡಬ್ಲ್ಯೂಡಿ ಇಲಾಖೆಗೆ ಸಂಬಂಧಪಟ್ಟಿದ್ದು, ಟೆಂಡರು ಕೂಡಾ ಆಗಿ ಕೆಲಸ ಪ್ರಾರಂಭಿಸಲಾಗಿತ್ತು. ರಸ್ತೆಯಿಂದ ಆ ಕಡೆಗೆ ಪರಿಶಿಷ್ಟ ಪಂಗಡ ಮತ್ತು ಇತರರು ಸೇರಿ 12 ಕ್ಕಿಂತಲೂ ಅಧಿಕ ಮನೆ ಇದ್ದು, ರಸ್ತೆಯಲ್ಲಿಯೇ ತಳಪಾಯವನ್ನು ಮಾಡಿ ಹೋದ ಗುತ್ತಿಗೆದಾರರು ಮತ್ತು ಪಿಡಬ್ಲ್ಯೂಡಿ ಇಲಾಖೆ ಈ ಭಾಗಕ್ಕೆ ಇನ್ನೂ ಬಾರದೇ ವಿಳಂಬ ಧೋರಣೆ ತಳೆದಿದೆ.
ರಸ್ತೆಯಲ್ಲಿಯೇ ತಳಪಾಯ ಮಾಡಿದ ಕಾರಣ ಆ ಭಾಗದ ಮನೆಯವರಿಗೆ, ಶಾಲಾಮಕ್ಕಳು ಮತ್ತು ವೃದ್ಧರಿಗೆ ಹೋಗಲು ರಸ್ತೆ ಹಾಗೂ ದಾರಿ ಇಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಪಿಡಬ್ಲ್ಯೂಡಿ ಇಲಾಖೆಗೆ ಮತ್ತು ಗುತ್ತಿಗೆದಾರರಿಗೆ ಆ ಭಾಗದ ಜನಪ್ರತಿನಿಧಿಗಳು ಸಾಕಷ್ಟು ಬಾರಿ ದೂರವಾಣಿ ಕರೆಯ ಮೂಲಕ ತಿಳಿಸಿದ್ದರು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಹೀಗಾಗಿ ತಕ್ಷಣವೇ ಕೆಲಸವನ್ನು ಪ್ರಾರಂಭಿಸದಿದ್ದಲ್ಲಿ ಪಿಡಬ್ಲ್ಯೂಡಿ ಇಲಾಖೆಯ ಮುಂದೆ ಧರಣಿ ನಡೆಸಲು ಸಾರ್ವಜನಿಕರು ನಿರ್ಧರಿಸಿದ್ದಾರೆ.
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…
ಮಲೆನಾಡಿನ ಅಡಿಕೆ ತೋಟ ಮಣ್ಣಿನಲ್ಲಿ ಕ್ಯಾಲ್ಸಿಯಂ-ಮೆಗ್ನೀಷಿಯಂ ಕೊರತೆ ಪತ್ತೆ. ತೀರ್ಥಹಳ್ಳಿ ಪ್ರದೇಶದಲ್ಲಿ ಪೋಷಕಾಂಶ…
ಕೊಬ್ಬರಿ ಎಣ್ಣೆ ಮತ್ತು ಕೋಪರಾ ಬೆಲೆಗಳು ಹೆಚ್ಚಿದ ಉತ್ಪಾದನೆ, ಕಡಿಮೆಯಾದ ಬೇಡಿಕೆ ಮತ್ತು…
ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…
ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…
ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…