Advertisement
ಸುದ್ದಿಗಳು

ಜನರೆಡೆಗೆ ತೆರಳಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ : ಸಾರ್ವಜನಿಕರಿಂದ ಶ್ಲಾಘನೆ

Share

ಸುಬ್ರಹ್ಮಣ್ಯ: ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು 3 ವರ್ಷ ಅವಧಿ ಪೂರೈಸಿ ಅವಧಿ ಕೊನೆಗೊಂಡಿದೆ. ಕಳೆದ 3 ವರ್ಷಗಳಿಂದ ಜನಪರವಾದ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳ ಮೂಲಕ ದೇವಸ್ಥಾನದ ಆಡಳಿತವೂ ಜನರೆಡೆಗೆ ತೆರಳಬಹುದು ಎಂದು ತೋರಿಸಿದೆ. ಹೀಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ, ಆಡಳಿತ ಮಂಡಳಿಗೆ ಅಭಿನಂದನಾ ಸಭೆಯೂ ನಡೆದಿದೆ.

2016 ಅ‌.15 ರಂದು ನಿತ್ಯಾನಂದ ಮುಂಡೋಡಿ ನೇತೃತ್ವದ ವ್ಯವಸ್ಥಾಪನಾ ಸಮಿತಿ  ದೇವಸ್ಥಾನದ ಅಧಿಕಾರ ಸ್ವೀಕರಿಸಿತ್ತು. ಜನಪರವಾದ ಕೆಲಸ ಕಾರ್ಯಗಳು ಹಾಗೂ ಧಾರ್ಮಿಕ ವಿಚಾರಗಳಿಗೆ ಆದ್ಯತೆ ನೀಡಿತ್ತು. ಕ್ಷೇತ್ರದ ಅಭಿವೃದ್ಧಿ ಹಾಗೂ ಕ್ಷೇತ್ರದಲ್ಲಿ ನಡೆಯುವ ಕೆಲವು ಕ್ಷೇತ್ರ ವಿರೋಧಿ ಕಾರ್ಯಗಳ ನಿಯಂತ್ರಣಕ್ಕೂ ಪ್ರಯತ್ನ ಮಾಡಿತ್ತು ಎಂದು ಸಾರ್ವಜನಿಕರು ಹೇಳುತ್ತಾರೆ. ಹೀಗಾಗಿಯೇ ಅಭಿನಂದನಾ ಕಾರ್ಯಕ್ರಮವೂ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ರವೀಂದ್ರ ಎಂ.ಎಚ್ ವರ್ಗಾವಣೆಗೊಂಡ ಬಳಿಕ ಪುತ್ತೂರು ಸಹಾಯಕ ಕಮೀಶನರ್ ಅವರು ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕವಾಗಿದ್ದು ಇದೀಗ  ಮಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಆಡಳಿತ ಮಂಡಳಿ ವತಿಯಿಂದ  ಅ.14 ರಂದು ಕ್ಷೇತ್ರದಲ್ಲಿ ನಡೆಸಲಾಗಿದ್ದ ಹಲವು ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆಗೆ ಸಿದ್ಧತೆಗಳನ್ನು ನಡೆಸಿತ್ತು.ಸೋಮವಾರ ಬೆಳಗ್ಗೆ ಉದ್ಘಾಟನೆಗಳು ಆಗಬೇಕಿತ್ತು. ಕೊನೆ ಕ್ಷಣದಲ್ಲಿ ಉದ್ಘಾಟನೆ ಕಾರ್ಯಕ್ರಮಗಳು ರದ್ದುಗೊಂಡಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

10 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

10 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

10 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

11 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago