Advertisement
ಸುದ್ದಿಗಳು

ಜನರೆಡೆಗೆ ತೆರಳಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ : ಸಾರ್ವಜನಿಕರಿಂದ ಶ್ಲಾಘನೆ

Share

ಸುಬ್ರಹ್ಮಣ್ಯ: ನಾಡಿನ ಪ್ರಸಿದ್ಧ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯು 3 ವರ್ಷ ಅವಧಿ ಪೂರೈಸಿ ಅವಧಿ ಕೊನೆಗೊಂಡಿದೆ. ಕಳೆದ 3 ವರ್ಷಗಳಿಂದ ಜನಪರವಾದ ಹಾಗೂ ಸಾರ್ವಜನಿಕ ಕೆಲಸ ಕಾರ್ಯಗಳ ಮೂಲಕ ದೇವಸ್ಥಾನದ ಆಡಳಿತವೂ ಜನರೆಡೆಗೆ ತೆರಳಬಹುದು ಎಂದು ತೋರಿಸಿದೆ. ಹೀಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ, ಆಡಳಿತ ಮಂಡಳಿಗೆ ಅಭಿನಂದನಾ ಸಭೆಯೂ ನಡೆದಿದೆ.

2016 ಅ‌.15 ರಂದು ನಿತ್ಯಾನಂದ ಮುಂಡೋಡಿ ನೇತೃತ್ವದ ವ್ಯವಸ್ಥಾಪನಾ ಸಮಿತಿ  ದೇವಸ್ಥಾನದ ಅಧಿಕಾರ ಸ್ವೀಕರಿಸಿತ್ತು. ಜನಪರವಾದ ಕೆಲಸ ಕಾರ್ಯಗಳು ಹಾಗೂ ಧಾರ್ಮಿಕ ವಿಚಾರಗಳಿಗೆ ಆದ್ಯತೆ ನೀಡಿತ್ತು. ಕ್ಷೇತ್ರದ ಅಭಿವೃದ್ಧಿ ಹಾಗೂ ಕ್ಷೇತ್ರದಲ್ಲಿ ನಡೆಯುವ ಕೆಲವು ಕ್ಷೇತ್ರ ವಿರೋಧಿ ಕಾರ್ಯಗಳ ನಿಯಂತ್ರಣಕ್ಕೂ ಪ್ರಯತ್ನ ಮಾಡಿತ್ತು ಎಂದು ಸಾರ್ವಜನಿಕರು ಹೇಳುತ್ತಾರೆ. ಹೀಗಾಗಿಯೇ ಅಭಿನಂದನಾ ಕಾರ್ಯಕ್ರಮವೂ ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ಈ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಾರ್ಯನಿರ್ವಹಣಾಧಿಕಾರಿ ಆಗಿದ್ದ ರವೀಂದ್ರ ಎಂ.ಎಚ್ ವರ್ಗಾವಣೆಗೊಂಡ ಬಳಿಕ ಪುತ್ತೂರು ಸಹಾಯಕ ಕಮೀಶನರ್ ಅವರು ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕವಾಗಿದ್ದು ಇದೀಗ  ಮಂಗಳೂರು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ವೆಂಕಟೇಶ್ ಅವರು ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಆಡಳಿತ ಮಂಡಳಿ ವತಿಯಿಂದ  ಅ.14 ರಂದು ಕ್ಷೇತ್ರದಲ್ಲಿ ನಡೆಸಲಾಗಿದ್ದ ಹಲವು ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆಗೆ ಸಿದ್ಧತೆಗಳನ್ನು ನಡೆಸಿತ್ತು.ಸೋಮವಾರ ಬೆಳಗ್ಗೆ ಉದ್ಘಾಟನೆಗಳು ಆಗಬೇಕಿತ್ತು. ಕೊನೆ ಕ್ಷಣದಲ್ಲಿ ಉದ್ಘಾಟನೆ ಕಾರ್ಯಕ್ರಮಗಳು ರದ್ದುಗೊಂಡಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

4 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago