Advertisement
ಕಾರ್ಯಕ್ರಮಗಳು

ಜನವರಿ 19 ರಂದು ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಲಿಮಲೆ ಆತಿಥ್ಯ

Share

ಸುಳ್ಯ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲಿಮಲೆ ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆತಿಥ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

Advertisement

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಊರ ಪ್ರಮುಖರ ಉಪಸ್ಥಿತಿಯಲ್ಲಿ ಎಲಿಮಲೆ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಸಮಾಲೋಚನೆ ನಡೆದು ಜನವರಿ 19 ರಂದು ಸಾಹಿತ್ಯ ಸಮ್ಮೇಳನ ನಡೆಸುವುದೆಂದು ನಿರ್ಧರಿಸಲಾಯಿತು. ಸಾಮಾಜಿಕ ಧುರೀಣ, ಜ್ಞಾನದೀಪ ವಿದ್ಯಾ ಸಂಸ್ಥೆಗಳ ಸಂಚಾಲಕ ಎ.ವಿ.ತೀರ್ಥರಾಮ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯಕ್ಕೆ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಗೌರವ ಕಾರ್ಯದರ್ಶಿ ಹಾಗೂ ಎಲಿಮಲೆ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲು, ಹಿರಿಯ ಸಾಹಿತಿ ಜಿ.ಎಸ್.ಉಬರಡ್ಕ, ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಶಿಕ್ಷಕ ಗೋಪಿನಾಥ ಮೆತ್ತಡ್ಕ, ಪ್ರೌಢ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ವಿಶ್ವನಾಥ ನಂದಗೋಕುಲ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಮಾನಂದ ಹೆಚ್.ಡಿ. , ಲಿಂಗಪ್ಪ ಮಾಸ್ತರ್ ಹರ್ಲಡ್ಕ, ಗದಾಧರ ಬಾಳುಗೋಡು, ಪುರುಷೋತ್ತಮ ಕಜೆ, ಓಂ ಪ್ರಕಾಶ್ ಕಜೆ, ಹರಿಪ್ರಸಾದ್ ಕಜೆ, ಜಯಂತ ತಳೂರು, ದಯಾನಂದ ಮೆತ್ತಡ್ಕ, ಹರೀಶ್ ಚಳ್ಳ, ದಿನೇಶ್ ಕೇರ, ಕೇಶವ ಕಜೆ, ರಂಜಿತ್ ಚಿತ್ತಡ್ಕ, ದೀಕ್ಷಿತ್ ಚಿತ್ತಡ್ಕ, ಜೀವನ್ ಕುಮಾರ್ ಟಿ,  ಶೃಜೇಶ್, ಹರಿಪ್ರಸಾದ್ ಬಿ.ವಿ., ಕಿಶನ್ ಎಂ. ಆಸ್ಮಾ, ತಾರನಾಥ ಅಡಿಗೈ, ಭೋಜಪ್ಪ  ಹರ್ಲಡ್ಕ, ಲೋಹಿತ್ ಮಾವಿನಗೊಡ್ಲು,  ಪಿ.ಭರತ್, ಶರತ್ ಮರ್ಗಿಲಡ್ಕ, ರಂಜಿತ್ ಎ.ವೈ. ಮೊದಲಾದವರು ಸಭೆಯಲ್ಲಿದ್ದರು.

ಸಮ್ಮೇಳನದ ರೂಪು ರೇಷೆಯ ಕುರಿತು ಡಾ.ಹರಪ್ರಸಾದ್ ತುದಿಯಡ್ಕ ಮಾಹಿತಿ ನೀಡಿದರು. ಸಮ್ಮೇಳನದ ಆತಿಥ್ಯ ವಹಿಸಲು ನಮಗೆ ಅವಕಾಶ ಸಿಕ್ಕಿರುವುದು ಸಂತೋಷದ ಸಂಗತಿ. ಎಲ್ಲರ ಸಹಕಾರದೊಂದಿಗೆ ಈ ಸಾಹಿತ್ಯ ಹಬ್ಬವನ್ನು ಯಶಸ್ವಿಗೊಳಿಸೋಣ ಎಂದು ಎ.ವಿ.ತೀರ್ಥರಾಮ ಹೇಳಿದರು. ಎಲಿಮಲೆಯ ಸಂಘಟನಾ ಶಕ್ತಿಯ ಮೂಲಕ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಮಾಡೋಣ ಎಂದು ಶೈಲೇಶ್ ಅಂಬೆಕಲ್ಲು ಹೇಳಿದರು.

ಚಂದ್ರಶೇಖರ ಪೇರಾಲು ಸ್ವಾಗತಿಸಿ ಪ್ರಸ್ತಾವನೆಗೈದರು. ಗೋಪಿನಾಥ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

37 minutes ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

5 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

5 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

5 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

17 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago