ಕಾರ್ಯಕ್ರಮಗಳು

ಜನವರಿ 19 ರಂದು ಸುಳ್ಯ ತಾಲೂಕು 24ನೇ ಕನ್ನಡ ಸಾಹಿತ್ಯ ಸಮ್ಮೇಳನ: ಎಲಿಮಲೆ ಆತಿಥ್ಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲಿಮಲೆ ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆತಿಥ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.

Advertisement
Advertisement

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಊರ ಪ್ರಮುಖರ ಉಪಸ್ಥಿತಿಯಲ್ಲಿ ಎಲಿಮಲೆ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಸಮಾಲೋಚನೆ ನಡೆದು ಜನವರಿ 19 ರಂದು ಸಾಹಿತ್ಯ ಸಮ್ಮೇಳನ ನಡೆಸುವುದೆಂದು ನಿರ್ಧರಿಸಲಾಯಿತು. ಸಾಮಾಜಿಕ ಧುರೀಣ, ಜ್ಞಾನದೀಪ ವಿದ್ಯಾ ಸಂಸ್ಥೆಗಳ ಸಂಚಾಲಕ ಎ.ವಿ.ತೀರ್ಥರಾಮ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯಕ್ಕೆ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಗೌರವ ಕಾರ್ಯದರ್ಶಿ ಹಾಗೂ ಎಲಿಮಲೆ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲು, ಹಿರಿಯ ಸಾಹಿತಿ ಜಿ.ಎಸ್.ಉಬರಡ್ಕ, ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಶಿಕ್ಷಕ ಗೋಪಿನಾಥ ಮೆತ್ತಡ್ಕ, ಪ್ರೌಢ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ವಿಶ್ವನಾಥ ನಂದಗೋಕುಲ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಮಾನಂದ ಹೆಚ್.ಡಿ. , ಲಿಂಗಪ್ಪ ಮಾಸ್ತರ್ ಹರ್ಲಡ್ಕ, ಗದಾಧರ ಬಾಳುಗೋಡು, ಪುರುಷೋತ್ತಮ ಕಜೆ, ಓಂ ಪ್ರಕಾಶ್ ಕಜೆ, ಹರಿಪ್ರಸಾದ್ ಕಜೆ, ಜಯಂತ ತಳೂರು, ದಯಾನಂದ ಮೆತ್ತಡ್ಕ, ಹರೀಶ್ ಚಳ್ಳ, ದಿನೇಶ್ ಕೇರ, ಕೇಶವ ಕಜೆ, ರಂಜಿತ್ ಚಿತ್ತಡ್ಕ, ದೀಕ್ಷಿತ್ ಚಿತ್ತಡ್ಕ, ಜೀವನ್ ಕುಮಾರ್ ಟಿ,  ಶೃಜೇಶ್, ಹರಿಪ್ರಸಾದ್ ಬಿ.ವಿ., ಕಿಶನ್ ಎಂ. ಆಸ್ಮಾ, ತಾರನಾಥ ಅಡಿಗೈ, ಭೋಜಪ್ಪ  ಹರ್ಲಡ್ಕ, ಲೋಹಿತ್ ಮಾವಿನಗೊಡ್ಲು,  ಪಿ.ಭರತ್, ಶರತ್ ಮರ್ಗಿಲಡ್ಕ, ರಂಜಿತ್ ಎ.ವೈ. ಮೊದಲಾದವರು ಸಭೆಯಲ್ಲಿದ್ದರು.

ಸಮ್ಮೇಳನದ ರೂಪು ರೇಷೆಯ ಕುರಿತು ಡಾ.ಹರಪ್ರಸಾದ್ ತುದಿಯಡ್ಕ ಮಾಹಿತಿ ನೀಡಿದರು. ಸಮ್ಮೇಳನದ ಆತಿಥ್ಯ ವಹಿಸಲು ನಮಗೆ ಅವಕಾಶ ಸಿಕ್ಕಿರುವುದು ಸಂತೋಷದ ಸಂಗತಿ. ಎಲ್ಲರ ಸಹಕಾರದೊಂದಿಗೆ ಈ ಸಾಹಿತ್ಯ ಹಬ್ಬವನ್ನು ಯಶಸ್ವಿಗೊಳಿಸೋಣ ಎಂದು ಎ.ವಿ.ತೀರ್ಥರಾಮ ಹೇಳಿದರು. ಎಲಿಮಲೆಯ ಸಂಘಟನಾ ಶಕ್ತಿಯ ಮೂಲಕ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಮಾಡೋಣ ಎಂದು ಶೈಲೇಶ್ ಅಂಬೆಕಲ್ಲು ಹೇಳಿದರು.

ಚಂದ್ರಶೇಖರ ಪೇರಾಲು ಸ್ವಾಗತಿಸಿ ಪ್ರಸ್ತಾವನೆಗೈದರು. ಗೋಪಿನಾಥ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |29.05.2025 | ಮೇ.31ರಿಂದ ಮಳೆ ಪ್ರಮಾಣ ಕಡಿಮೆ

30.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

12 hours ago

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

19 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

20 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

20 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

20 hours ago