ಸುಳ್ಯ: ಸುಳ್ಯ ತಾಲೂಕು 24 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲಿಮಲೆ ಸರಕಾರಿ ಪ್ರೌಢ ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಆತಿಥ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಹಿರಿಯ ವಿದ್ಯಾರ್ಥಿ ಸಂಘ ಮತ್ತು ಊರ ಪ್ರಮುಖರ ಉಪಸ್ಥಿತಿಯಲ್ಲಿ ಎಲಿಮಲೆ ಶಾಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಸಮಾಲೋಚನೆ ನಡೆದು ಜನವರಿ 19 ರಂದು ಸಾಹಿತ್ಯ ಸಮ್ಮೇಳನ ನಡೆಸುವುದೆಂದು ನಿರ್ಧರಿಸಲಾಯಿತು. ಸಾಮಾಜಿಕ ಧುರೀಣ, ಜ್ಞಾನದೀಪ ವಿದ್ಯಾ ಸಂಸ್ಥೆಗಳ ಸಂಚಾಲಕ ಎ.ವಿ.ತೀರ್ಥರಾಮ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯಕ್ಕೆ ಪರಿಷತ್ ಅಧ್ಯಕ್ಷ ಡಾ.ಹರಪ್ರಸಾದ್ ತುದಿಯಡ್ಕ, ಗೌರವ ಕಾರ್ಯದರ್ಶಿ ಹಾಗೂ ಎಲಿಮಲೆ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ ಪೇರಾಲು, ಹಿರಿಯ ಸಾಹಿತಿ ಜಿ.ಎಸ್.ಉಬರಡ್ಕ, ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿರಣ್ ಗುಡ್ಡೆಮನೆ, ಶಿಕ್ಷಕ ಗೋಪಿನಾಥ ಮೆತ್ತಡ್ಕ, ಪ್ರೌಢ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ವಿಶ್ವನಾಥ ನಂದಗೋಕುಲ, ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ರಮಾನಂದ ಹೆಚ್.ಡಿ. , ಲಿಂಗಪ್ಪ ಮಾಸ್ತರ್ ಹರ್ಲಡ್ಕ, ಗದಾಧರ ಬಾಳುಗೋಡು, ಪುರುಷೋತ್ತಮ ಕಜೆ, ಓಂ ಪ್ರಕಾಶ್ ಕಜೆ, ಹರಿಪ್ರಸಾದ್ ಕಜೆ, ಜಯಂತ ತಳೂರು, ದಯಾನಂದ ಮೆತ್ತಡ್ಕ, ಹರೀಶ್ ಚಳ್ಳ, ದಿನೇಶ್ ಕೇರ, ಕೇಶವ ಕಜೆ, ರಂಜಿತ್ ಚಿತ್ತಡ್ಕ, ದೀಕ್ಷಿತ್ ಚಿತ್ತಡ್ಕ, ಜೀವನ್ ಕುಮಾರ್ ಟಿ, ಶೃಜೇಶ್, ಹರಿಪ್ರಸಾದ್ ಬಿ.ವಿ., ಕಿಶನ್ ಎಂ. ಆಸ್ಮಾ, ತಾರನಾಥ ಅಡಿಗೈ, ಭೋಜಪ್ಪ ಹರ್ಲಡ್ಕ, ಲೋಹಿತ್ ಮಾವಿನಗೊಡ್ಲು, ಪಿ.ಭರತ್, ಶರತ್ ಮರ್ಗಿಲಡ್ಕ, ರಂಜಿತ್ ಎ.ವೈ. ಮೊದಲಾದವರು ಸಭೆಯಲ್ಲಿದ್ದರು.
ಸಮ್ಮೇಳನದ ರೂಪು ರೇಷೆಯ ಕುರಿತು ಡಾ.ಹರಪ್ರಸಾದ್ ತುದಿಯಡ್ಕ ಮಾಹಿತಿ ನೀಡಿದರು. ಸಮ್ಮೇಳನದ ಆತಿಥ್ಯ ವಹಿಸಲು ನಮಗೆ ಅವಕಾಶ ಸಿಕ್ಕಿರುವುದು ಸಂತೋಷದ ಸಂಗತಿ. ಎಲ್ಲರ ಸಹಕಾರದೊಂದಿಗೆ ಈ ಸಾಹಿತ್ಯ ಹಬ್ಬವನ್ನು ಯಶಸ್ವಿಗೊಳಿಸೋಣ ಎಂದು ಎ.ವಿ.ತೀರ್ಥರಾಮ ಹೇಳಿದರು. ಎಲಿಮಲೆಯ ಸಂಘಟನಾ ಶಕ್ತಿಯ ಮೂಲಕ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಮಾಡೋಣ ಎಂದು ಶೈಲೇಶ್ ಅಂಬೆಕಲ್ಲು ಹೇಳಿದರು.
ಚಂದ್ರಶೇಖರ ಪೇರಾಲು ಸ್ವಾಗತಿಸಿ ಪ್ರಸ್ತಾವನೆಗೈದರು. ಗೋಪಿನಾಥ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…