Categories: Uncategorized

ಜನವರಿ 4 ಮತ್ತು 5 : ಪುತ್ತೂರಿನಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಬಿಡುಗಡೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: “ಉಣ್ಣುವ ಆಹಾರಗಳು ಅನ್ಯಾನ್ಯ ಕಾರಣಗಳಿಂದಾಗಿ ವಿಷಮಯವಾಗುತ್ತಿದ್ದು ಅದರಿಂದ ಹೊರಗೆ ಬರಲು ಸಾವಯವ ಆಹಾರದ ಸೇವನೆ ಒಂದೇ ಹಾದಿ. ಈ ಹಿನ್ನೆಲೆಯಲ್ಲಿ ಸಾವಯವ ಹಬ್ಬವು ಜನರಲ್ಲಿ ಅರಿವನ್ನು ಮೂಡಿಸಲು ನೆರವಾಗಬೇಕು.” ಎಂದು ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ವಿಜಯ ಹಾರ್ವಿನ್ ಅಭಿಪ್ರಾಯಪಟ್ಟರು.

Advertisement
Advertisement

ಅವರು ಸುದಾನ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 2020ರ ಜನವರಿ 4 ಮತ್ತು 5ರಂದು ಪುತ್ತೂರಿನ ‘ಶ್ರೀ ಮಹಾಲಿಂಗೇಶ್ವರ ಸಭಾಭವನ’ದಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಜಯ ಹಾರ್ವಿನ್ ಅವರು ಹಬ್ಬದ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರಾಗಿದ್ದು, ಈ ವರೆಗೆ ಆದಂತಹ ಹಬ್ಬದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ನವಚೇತನ ಸ್ನೇಹ ಸಂಗಮ ಮತ್ತು ಜೆ.ಸಿ.ಐ.ಪುತ್ತೂರು ಇವರು ಆಯೋಜಿಸುವ ಸಾವಯವ ಹಬ್ಬದ ಕುರಿತು ಮತ್ತು ಅಂದು ನಡೆಯುವ ಕಲಾಪಗಳ ಕುರಿತು ಸಂಗಮದ ಕಾರ್ಯದರ್ಶಿ ಸುಹಾಸ್ ಮರಿಕೆ ವಿವರ ನೀಡಿದರು. ಅಧ್ಯಕ್ಷ ಅನಂತಕೃಷ್ಣ ನೈತ್ತಡ್ಕ ಅಂದು ಪ್ರದರ್ಶಿತವಾಗಲಿರುವ ಉದ್ದೇಶಿತ ಮೌಲ್ಯವರ್ಧಿತ ಉತ್ಪನ್ನಗಳ ವಿವರಗಳನ್ನು ನೀಡಿದರು.
ಸಭೆಯಲ್ಲಿ ಜೆಸಿಐ ಅಧ್ಯಕ್ಷ ಜೇಸಿ ಎಸ್.ಜೆ.ವೇಣುಗೋಪಾಲ್, ಕಾರ್ಯದರ್ಶಿ ಜೇಸಿ ಪ್ರಮಿತ ಸಿ.ಹಾಸ್, ಜೇಸಿ ರಘು ಶೆಟ್ಟಿ, ಜೇಸಿ ಶಶಿರಾಜ್, ಜೇಸಿ ಗೌತಮ್ ರೈ, ಪಾಂಡುರಂಗ ಭಟ್, ಪ್ರಕಾಶ್ ಕುಮಾರ್ ಕೊಡೆಂಕಿರಿ, ಆದಿತ್ಯ ಕೊಡೆಂಕಿರಿ, ಗಣರಾಜ್ ಭಟ್, ಶಂಕರಿ ಶರ್ಮ ಮೊದಲಾದವರು ಭಾಗವಹಿಸಿದರು.

ಸುಹಾಸ್ ಸ್ವಾಗತಿಸಿದರು. ಪ್ರಮಿತ ಸಿ. ಹಾಸ್ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

10 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

12 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

18 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

19 hours ago