Advertisement
Categories: Uncategorized

ಜನವರಿ 4 ಮತ್ತು 5 : ಪುತ್ತೂರಿನಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಬಿಡುಗಡೆ

Share

ಪುತ್ತೂರು: “ಉಣ್ಣುವ ಆಹಾರಗಳು ಅನ್ಯಾನ್ಯ ಕಾರಣಗಳಿಂದಾಗಿ ವಿಷಮಯವಾಗುತ್ತಿದ್ದು ಅದರಿಂದ ಹೊರಗೆ ಬರಲು ಸಾವಯವ ಆಹಾರದ ಸೇವನೆ ಒಂದೇ ಹಾದಿ. ಈ ಹಿನ್ನೆಲೆಯಲ್ಲಿ ಸಾವಯವ ಹಬ್ಬವು ಜನರಲ್ಲಿ ಅರಿವನ್ನು ಮೂಡಿಸಲು ನೆರವಾಗಬೇಕು.” ಎಂದು ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ವಿಜಯ ಹಾರ್ವಿನ್ ಅಭಿಪ್ರಾಯಪಟ್ಟರು.

ಅವರು ಸುದಾನ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 2020ರ ಜನವರಿ 4 ಮತ್ತು 5ರಂದು ಪುತ್ತೂರಿನ ‘ಶ್ರೀ ಮಹಾಲಿಂಗೇಶ್ವರ ಸಭಾಭವನ’ದಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಜಯ ಹಾರ್ವಿನ್ ಅವರು ಹಬ್ಬದ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರಾಗಿದ್ದು, ಈ ವರೆಗೆ ಆದಂತಹ ಹಬ್ಬದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

ನವಚೇತನ ಸ್ನೇಹ ಸಂಗಮ ಮತ್ತು ಜೆ.ಸಿ.ಐ.ಪುತ್ತೂರು ಇವರು ಆಯೋಜಿಸುವ ಸಾವಯವ ಹಬ್ಬದ ಕುರಿತು ಮತ್ತು ಅಂದು ನಡೆಯುವ ಕಲಾಪಗಳ ಕುರಿತು ಸಂಗಮದ ಕಾರ್ಯದರ್ಶಿ ಸುಹಾಸ್ ಮರಿಕೆ ವಿವರ ನೀಡಿದರು. ಅಧ್ಯಕ್ಷ ಅನಂತಕೃಷ್ಣ ನೈತ್ತಡ್ಕ ಅಂದು ಪ್ರದರ್ಶಿತವಾಗಲಿರುವ ಉದ್ದೇಶಿತ ಮೌಲ್ಯವರ್ಧಿತ ಉತ್ಪನ್ನಗಳ ವಿವರಗಳನ್ನು ನೀಡಿದರು.
ಸಭೆಯಲ್ಲಿ ಜೆಸಿಐ ಅಧ್ಯಕ್ಷ ಜೇಸಿ ಎಸ್.ಜೆ.ವೇಣುಗೋಪಾಲ್, ಕಾರ್ಯದರ್ಶಿ ಜೇಸಿ ಪ್ರಮಿತ ಸಿ.ಹಾಸ್, ಜೇಸಿ ರಘು ಶೆಟ್ಟಿ, ಜೇಸಿ ಶಶಿರಾಜ್, ಜೇಸಿ ಗೌತಮ್ ರೈ, ಪಾಂಡುರಂಗ ಭಟ್, ಪ್ರಕಾಶ್ ಕುಮಾರ್ ಕೊಡೆಂಕಿರಿ, ಆದಿತ್ಯ ಕೊಡೆಂಕಿರಿ, ಗಣರಾಜ್ ಭಟ್, ಶಂಕರಿ ಶರ್ಮ ಮೊದಲಾದವರು ಭಾಗವಹಿಸಿದರು.

ಸುಹಾಸ್ ಸ್ವಾಗತಿಸಿದರು. ಪ್ರಮಿತ ಸಿ. ಹಾಸ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

18 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

23 hours ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

24 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

1 day ago