Advertisement
Categories: Uncategorized

ಜನವರಿ 4 ಮತ್ತು 5 : ಪುತ್ತೂರಿನಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಬಿಡುಗಡೆ

Share

ಪುತ್ತೂರು: “ಉಣ್ಣುವ ಆಹಾರಗಳು ಅನ್ಯಾನ್ಯ ಕಾರಣಗಳಿಂದಾಗಿ ವಿಷಮಯವಾಗುತ್ತಿದ್ದು ಅದರಿಂದ ಹೊರಗೆ ಬರಲು ಸಾವಯವ ಆಹಾರದ ಸೇವನೆ ಒಂದೇ ಹಾದಿ. ಈ ಹಿನ್ನೆಲೆಯಲ್ಲಿ ಸಾವಯವ ಹಬ್ಬವು ಜನರಲ್ಲಿ ಅರಿವನ್ನು ಮೂಡಿಸಲು ನೆರವಾಗಬೇಕು.” ಎಂದು ಸುದಾನ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ.ವಿಜಯ ಹಾರ್ವಿನ್ ಅಭಿಪ್ರಾಯಪಟ್ಟರು.

ಅವರು ಸುದಾನ ಶಾಲೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 2020ರ ಜನವರಿ 4 ಮತ್ತು 5ರಂದು ಪುತ್ತೂರಿನ ‘ಶ್ರೀ ಮಹಾಲಿಂಗೇಶ್ವರ ಸಭಾಭವನ’ದಲ್ಲಿ ನಡೆಯಲಿರುವ ಸಾವಯವ ಹಬ್ಬದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ವಿಜಯ ಹಾರ್ವಿನ್ ಅವರು ಹಬ್ಬದ ಕ್ರಿಯಾ ಸಮಿತಿಯ ಗೌರವಾಧ್ಯಕ್ಷರಾಗಿದ್ದು, ಈ ವರೆಗೆ ಆದಂತಹ ಹಬ್ಬದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು.

Advertisement

ನವಚೇತನ ಸ್ನೇಹ ಸಂಗಮ ಮತ್ತು ಜೆ.ಸಿ.ಐ.ಪುತ್ತೂರು ಇವರು ಆಯೋಜಿಸುವ ಸಾವಯವ ಹಬ್ಬದ ಕುರಿತು ಮತ್ತು ಅಂದು ನಡೆಯುವ ಕಲಾಪಗಳ ಕುರಿತು ಸಂಗಮದ ಕಾರ್ಯದರ್ಶಿ ಸುಹಾಸ್ ಮರಿಕೆ ವಿವರ ನೀಡಿದರು. ಅಧ್ಯಕ್ಷ ಅನಂತಕೃಷ್ಣ ನೈತ್ತಡ್ಕ ಅಂದು ಪ್ರದರ್ಶಿತವಾಗಲಿರುವ ಉದ್ದೇಶಿತ ಮೌಲ್ಯವರ್ಧಿತ ಉತ್ಪನ್ನಗಳ ವಿವರಗಳನ್ನು ನೀಡಿದರು.
ಸಭೆಯಲ್ಲಿ ಜೆಸಿಐ ಅಧ್ಯಕ್ಷ ಜೇಸಿ ಎಸ್.ಜೆ.ವೇಣುಗೋಪಾಲ್, ಕಾರ್ಯದರ್ಶಿ ಜೇಸಿ ಪ್ರಮಿತ ಸಿ.ಹಾಸ್, ಜೇಸಿ ರಘು ಶೆಟ್ಟಿ, ಜೇಸಿ ಶಶಿರಾಜ್, ಜೇಸಿ ಗೌತಮ್ ರೈ, ಪಾಂಡುರಂಗ ಭಟ್, ಪ್ರಕಾಶ್ ಕುಮಾರ್ ಕೊಡೆಂಕಿರಿ, ಆದಿತ್ಯ ಕೊಡೆಂಕಿರಿ, ಗಣರಾಜ್ ಭಟ್, ಶಂಕರಿ ಶರ್ಮ ಮೊದಲಾದವರು ಭಾಗವಹಿಸಿದರು.

ಸುಹಾಸ್ ಸ್ವಾಗತಿಸಿದರು. ಪ್ರಮಿತ ಸಿ. ಹಾಸ್ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

3 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

6 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

6 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

14 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

16 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

16 hours ago