ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಬಾಳಿಲದಲ್ಲಿ ಕ್ಲಿನಿಕ್ ಹೊಂದಿದ್ದ ಡಾ|ಪಿ ಜಿ ಎಸ್ ಪ್ರಕಾಶ್ ಗ್ರಾಮೀಣ ಭಾಗದ ಜನಾನುರಾಗಿ ವೈದ್ಯರಾಗಿದ್ದರು. ಕಡಿಮೆ ದರದಲ್ಲಿ ಔಷಧಿ ಹಾಗೂ ನಿಖರ ಚಿಕಿತ್ಸೆ ಮೂಲಕ ಹೆಸರುವಾಸಿಯಾಗಿ ಬೆಳ್ಳಾರೆ ಸಹಿತ ವಿವಿದೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಇದೀಗ ಡಾ|ಪಿ ಜಿ ಎಸ್ ಪ್ರಕಾಶ್ ನಿಧನರಾಗಿರುವುದು ಗ್ರಾಮೀಣ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.
ಬುಧವಾರ ರಾತ್ರಿಯೂ ಕ್ಲಿನಿಕ್ ಗೆ ಆಗಮಿಸಿದ ರೋಗಿಗಳಿಗೆ ಔಷಧಿ ನೀಡಿದ್ದರು. ಬಳಿಕ ಮನೆಯ ಗೇಟ್ ಹಾಗೂ ಕ್ಲಿನಿಕ್ ಬಾಗಿಲು ಹಾಕಲು ತೆರಳಿದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ವಿಷಯ ತಿಳಿದ ತಕ್ಷಣವೇ ಮನೆಯವರು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…