ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಬಾಳಿಲದಲ್ಲಿ ಕ್ಲಿನಿಕ್ ಹೊಂದಿದ್ದ ಡಾ|ಪಿ ಜಿ ಎಸ್ ಪ್ರಕಾಶ್ ಗ್ರಾಮೀಣ ಭಾಗದ ಜನಾನುರಾಗಿ ವೈದ್ಯರಾಗಿದ್ದರು. ಕಡಿಮೆ ದರದಲ್ಲಿ ಔಷಧಿ ಹಾಗೂ ನಿಖರ ಚಿಕಿತ್ಸೆ ಮೂಲಕ ಹೆಸರುವಾಸಿಯಾಗಿ ಬೆಳ್ಳಾರೆ ಸಹಿತ ವಿವಿದೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಇದೀಗ ಡಾ|ಪಿ ಜಿ ಎಸ್ ಪ್ರಕಾಶ್ ನಿಧನರಾಗಿರುವುದು ಗ್ರಾಮೀಣ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.
ಬುಧವಾರ ರಾತ್ರಿಯೂ ಕ್ಲಿನಿಕ್ ಗೆ ಆಗಮಿಸಿದ ರೋಗಿಗಳಿಗೆ ಔಷಧಿ ನೀಡಿದ್ದರು. ಬಳಿಕ ಮನೆಯ ಗೇಟ್ ಹಾಗೂ ಕ್ಲಿನಿಕ್ ಬಾಗಿಲು ಹಾಕಲು ತೆರಳಿದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ವಿಷಯ ತಿಳಿದ ತಕ್ಷಣವೇ ಮನೆಯವರು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…