ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಬಾಳಿಲದಲ್ಲಿ ಕ್ಲಿನಿಕ್ ಹೊಂದಿದ್ದ ಡಾ|ಪಿ ಜಿ ಎಸ್ ಪ್ರಕಾಶ್ ಗ್ರಾಮೀಣ ಭಾಗದ ಜನಾನುರಾಗಿ ವೈದ್ಯರಾಗಿದ್ದರು. ಕಡಿಮೆ ದರದಲ್ಲಿ ಔಷಧಿ ಹಾಗೂ ನಿಖರ ಚಿಕಿತ್ಸೆ ಮೂಲಕ ಹೆಸರುವಾಸಿಯಾಗಿ ಬೆಳ್ಳಾರೆ ಸಹಿತ ವಿವಿದೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಇದೀಗ ಡಾ|ಪಿ ಜಿ ಎಸ್ ಪ್ರಕಾಶ್ ನಿಧನರಾಗಿರುವುದು ಗ್ರಾಮೀಣ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.
ಬುಧವಾರ ರಾತ್ರಿಯೂ ಕ್ಲಿನಿಕ್ ಗೆ ಆಗಮಿಸಿದ ರೋಗಿಗಳಿಗೆ ಔಷಧಿ ನೀಡಿದ್ದರು. ಬಳಿಕ ಮನೆಯ ಗೇಟ್ ಹಾಗೂ ಕ್ಲಿನಿಕ್ ಬಾಗಿಲು ಹಾಕಲು ತೆರಳಿದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ವಿಷಯ ತಿಳಿದ ತಕ್ಷಣವೇ ಮನೆಯವರು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.
2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…
ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…
ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…
ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…