ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಬಾಳಿಲದಲ್ಲಿ ಕ್ಲಿನಿಕ್ ಹೊಂದಿದ್ದ ಡಾ|ಪಿ ಜಿ ಎಸ್ ಪ್ರಕಾಶ್ ಗ್ರಾಮೀಣ ಭಾಗದ ಜನಾನುರಾಗಿ ವೈದ್ಯರಾಗಿದ್ದರು. ಕಡಿಮೆ ದರದಲ್ಲಿ ಔಷಧಿ ಹಾಗೂ ನಿಖರ ಚಿಕಿತ್ಸೆ ಮೂಲಕ ಹೆಸರುವಾಸಿಯಾಗಿ ಬೆಳ್ಳಾರೆ ಸಹಿತ ವಿವಿದೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಇದೀಗ ಡಾ|ಪಿ ಜಿ ಎಸ್ ಪ್ರಕಾಶ್ ನಿಧನರಾಗಿರುವುದು ಗ್ರಾಮೀಣ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.
ಬುಧವಾರ ರಾತ್ರಿಯೂ ಕ್ಲಿನಿಕ್ ಗೆ ಆಗಮಿಸಿದ ರೋಗಿಗಳಿಗೆ ಔಷಧಿ ನೀಡಿದ್ದರು. ಬಳಿಕ ಮನೆಯ ಗೇಟ್ ಹಾಗೂ ಕ್ಲಿನಿಕ್ ಬಾಗಿಲು ಹಾಕಲು ತೆರಳಿದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ವಿಷಯ ತಿಳಿದ ತಕ್ಷಣವೇ ಮನೆಯವರು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…