ಬೆಳ್ಳಾರೆ: ಜನಾನುರಾಗಿ ವೈದ್ಯರಾಗಿದ್ದ ಬಾಳಿಲದ ಡಾ|ಪಿ ಜಿ ಎಸ್ ಪ್ರಕಾಶ್(59) ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ ಹಾಗೂ ಸಹೋದರರು ಮತ್ತು ಸಹೋದರಿಯನ್ನು ಅಗಲಿದ್ದಾರೆ.
ಬಾಳಿಲದಲ್ಲಿ ಕ್ಲಿನಿಕ್ ಹೊಂದಿದ್ದ ಡಾ|ಪಿ ಜಿ ಎಸ್ ಪ್ರಕಾಶ್ ಗ್ರಾಮೀಣ ಭಾಗದ ಜನಾನುರಾಗಿ ವೈದ್ಯರಾಗಿದ್ದರು. ಕಡಿಮೆ ದರದಲ್ಲಿ ಔಷಧಿ ಹಾಗೂ ನಿಖರ ಚಿಕಿತ್ಸೆ ಮೂಲಕ ಹೆಸರುವಾಸಿಯಾಗಿ ಬೆಳ್ಳಾರೆ ಸಹಿತ ವಿವಿದೆಡೆಯಿಂದ ರೋಗಿಗಳು ಆಗಮಿಸುತ್ತಿದ್ದರು. ಇದೀಗ ಡಾ|ಪಿ ಜಿ ಎಸ್ ಪ್ರಕಾಶ್ ನಿಧನರಾಗಿರುವುದು ಗ್ರಾಮೀಣ ಭಾಗಕ್ಕೆ ತುಂಬಲಾರದ ನಷ್ಟವಾಗಿದೆ.
ಬುಧವಾರ ರಾತ್ರಿಯೂ ಕ್ಲಿನಿಕ್ ಗೆ ಆಗಮಿಸಿದ ರೋಗಿಗಳಿಗೆ ಔಷಧಿ ನೀಡಿದ್ದರು. ಬಳಿಕ ಮನೆಯ ಗೇಟ್ ಹಾಗೂ ಕ್ಲಿನಿಕ್ ಬಾಗಿಲು ಹಾಕಲು ತೆರಳಿದ ವೇಳೆ ಹೃದಯಾಘಾತವಾಗಿ ಕುಸಿದು ಬಿದ್ದಿದ್ದರು. ವಿಷಯ ತಿಳಿದ ತಕ್ಷಣವೇ ಮನೆಯವರು ಆಸ್ಪತ್ರೆಗೆ ಕರೆದೊಯ್ದರೂ ಆ ವೇಳೆಗೆ ಮೃತಪಟ್ಟಿದ್ದರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…