ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ. ಸದ್ದಿಲ್ಲದೆ ಅಲ್ಲಲ್ಲಿ ಕಂಡುಬರುತ್ತಿದೆ. ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಎಚ್ಚರಿಸಿದರೂ ಜನರು ಕ್ಯಾರೇ ಅನ್ನುತ್ತಿಲ್ಲ. ಹೀಗಾದರೆ ಏನು ಮಾಡಬಹುದು ಎಂಬುದರ ಬಗ್ಗೆ ಅನೇಕರು ವ್ಯಾಟ್ಸಪ್ ಮೂಲಕ ದಿನವೂ ತಮ್ಮ ಐಡಿಯಾ ನೀಡುತ್ತಾರೆ. ಇದರಲ್ಲಿ ಆಯ್ದ ಬರಹಗಳನ್ನು ಇಲ್ಲಿ ಪ್ರಕಟಿಸಲು ಇಂದಿನಿಂದ ನಿರ್ಧರಿಸಲಾಗಿದೆ. ಉತ್ತಮ ಯೋಚನೆ ಇದ್ದರೆ ತಿಳಿಸಿ.. ಪ್ರಕಟಿಸಲಾಗುತ್ತದೆ
- (ಸಂ- ಸುಳ್ಯನ್ಯೂಸ್.ಕಾಂ)
ಕೊರೋನ ಕುರಿತು, ಅದರ ತೀವ್ರತೆ ಬಗ್ಗೆ ಜನಸಾಮಾನ್ಯರಿಗೆ ಇನ್ನೂ ಗೊತ್ತಾಗಿರುವಂತೆ ಕಾಣುತ್ತಿಲ್ಲ. ಅವರುಗಳು ಈಗಲು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪೇಟೆಗೆ ಬರುತ್ತಿರುವುದು ಕಂಡುಬರುತ್ತದೆ. ಸಾಮಾನು ಖರೀದಿಗೆ ಗುಂಪು.. ಗುಂಪಾಗಿ.. ಸೇರುವುದರಿಂದ ಕೊರೊನಾ ವೈರಸ್ ಆಯಾ ಪ್ರದೇಶದಲ್ಲಿ ಇದ್ದರೆ ಬಹುಬೇಗನೆ ಹರಡಲು ಸಾಧ್ಯವಿದೆ. ಅದಕ್ಕಾಗಿ ಪ್ರತೀ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅವರದೇ ಆದ ಗ್ರಾಮದ ವ್ಯಾಪ್ತಿಯಲ್ಲಿ ವಾಹನದಲ್ಲಿ..ನಿಧಾನವಾಗಿ.. ದ್ವನಿ ವರ್ಧಕದ ಮೂಲಕ ಕೊರೊನ ಕುರಿತಾಗಿ ಅದರ ತೀವ್ರತೆಯ ವಿಚಾರ ತಿಳಿಸಿ. ಜನರಳಲ್ಲಿ ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಮೂಲಕ ಜನಗಳು ಎಚ್ಛೆತ್ತುಕೊಳ್ಳುವಂತೆ ಮಾಡಬೇಕು ಎಂಬುದು ಮೂಡಬಿದ್ರೆಯ ಜಯಕೃಷ್ಣ ಭಟ್ ಅವರ ಅಭಿಪ್ರಾಯ.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…