Advertisement
ರಾಜ್ಯ

ಜಮ್ಮು ಕಾಶ್ಮೀರದ ವಿಶೇಷ ಅಧಿಕಾರ ರದ್ದು: ಸುಳ್ಯದಲ್ಲಿ ವಿಜಯೋತ್ಸವ

Share

ಸುಳ್ಯ:ಜಮ್ಮು ಕಾಶ್ಮೀರದ ವಿಶೇಷ ಅಧಿಕಾರ ತೆಗೆದುಹಾಕಿದ ಕೇಂದ್ರ ಸರಕಾರದ ಕ್ರಮವನ್ನು ಶ್ಲಾಘಿಸಿ ದೇಶಪ್ರೇಮಿ ಬಳಗ ಸುಳ್ಯ ಇದರ ಆಶ್ರಯದಲ್ಲಿ ವಿಜಯೋತ್ಸವ ಸುಳ್ಯ ಬಸ್ ನಿಲ್ದಾಣದ ಬಳಿಯಲ್ಲಿ ನಡೆಯಿತು.

ವಿಜಯೋತ್ಸವವನ್ನು ಉದ್ಧೇಶಿಸಿ ಶಾಸಕ ಎಸ್.ಅಂಗಾರ ಮಾತನಾಡಿ ಇದು ಸ್ವಾತಂತ್ರ್ಯಾನಂತರದ ದೇಶದ ಜನತೆಯ ಅತೀ ದೊಡ್ಡ ಜಯ ಮತ್ತು ಸಂವಿಧಾನದ ಜಯ ಎಂದು ಬಣ್ಣಿಸಿದರು.
ಸಂಭ್ರಮ ಪಡುವ ದಿನ. ಜಮ್ಮು ಕಾಶ್ಮಿರದ ಜನತೆಗೆ ಇಲ್ಲಿರುವ ಸ್ವಾತಂತ್ರ್ಯ ಇಲ್ಲ. ಕಾಂಗ್ರೆಸ್ ಅಧಿಕಾರಕ್ಕಾಗಿ ಪ್ರತ್ಯೇಕ ಸ್ಥಾನ ನೀಡಿತ್ತು. ಕಾಂಗ್ರೆಸ್ ಗೆ ದೇಶ ಭಕ್ತಿ ಇರುತ್ತಿದ್ದರೆ ದೇಶ ಒಡೆಯುವ ಕೆಲಸ ಮಾಡುತ್ತಿರಲಿಲ್ಲ. ಆದರೆ ಕಾಲ ಬದಲಾಗಿದೆ. ಪರಿಹಾರ ಕಂಡುಕೊಳ್ಳುವ ಕೆಲಸ ಮೋದಿ, ಅಮಿತ್ ಶಾ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಶಕ್ತಿ ಕೇಂದ್ರದ ಅಧ್ಯಕ್ಷ  ವಿನಯ್ ಕುಮಾರ್ ಕಂದಡ್ಕ ಮಾತನಾಡಿದರು.

ನ.ಪಂ.ಸದಸ್ಯರಾದ ಸುಧಾಕರ, ಪೂಜಿತಾ ಕೆ.ಯು., ಪ್ರಮುಖರಾದ ಪಿ.ಕೆ.ಉಮೇಶ್, ಹರೀಶ್ ಬೂಡುಪನ್ನೆ, ದಾಮೋದರ ಮಂಚಿ, ಗಿರೀಶ್ ಕಲ್ಲುಗದ್ದೆ, ಸುರೇಶ್ ಕಣೆಮರಡ್ಕ, ಸುನಿಲ್ ಕೇರ್ಪಳ, ಪ್ರೀತಮ್ ಡಿ.ಕೆ., ಸತೀಶ್ ಕಾಟೂರು, ಪ್ರಕಾಶ್ ಯಾದವ್, ವಿಘ್ನೇಶ್ ಆಚಾರ್ಯ, ಲೋಕೇಶ್ ಕೆರೆಮೂಲೆ, ಜನಾರ್ದನ, ಡಾ.ಮನೋಜ್ ಅಡ್ಡಂತಡ್ಕ, ರಾಮಕೃಷ್ಣ ಆಳಂಕಲ್ಯ, ಗುರುಪ್ರಕಾಶ್, ಶಂಕರ್ ಪೆರಾಜೆ, ಚಂದ್ರಾ ಕೋಲ್ಚಾರ್, ದಯಾನಂದ ಕೇರ್ಪಳ, ಶರತ್ ಮೊದಲಾದವರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

7 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

13 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

24 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

1 day ago