ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಭೂಗತ ಲೋಕದಲ್ಲಿ ಗುರುತಿಸಿಕೊಂಡು ನಂತರ ಮನಪರಿವರ್ತನೆಯಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ಕನ್ನಡಿಗರಿಗೆ ನೆರವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಇಚ್ಚೆಯಂತೆ ಬಂಟ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಬಿಡದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು ಮುತ್ತಪ್ಪ ರೈ ಅವರ ಹಿರಿಯ ವಿದೇಶದದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಅವರ ಕಿರಿಯ ಮಗ ಎಲ್ಲಾ ಅಂತಿಮ ವಿಧಿವಿಧಾನ ನಡೆಸಲಿದ್ದು ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಮುತ್ತಪ್ಪ ರೈ ಅವರ ಆಪ್ತ ವಲಯ ತಿಳಿಸಿದೆ.
2013 ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…