ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಭೂಗತ ಲೋಕದಲ್ಲಿ ಗುರುತಿಸಿಕೊಂಡು ನಂತರ ಮನಪರಿವರ್ತನೆಯಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ಕನ್ನಡಿಗರಿಗೆ ನೆರವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಇಚ್ಚೆಯಂತೆ ಬಂಟ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಬಿಡದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು ಮುತ್ತಪ್ಪ ರೈ ಅವರ ಹಿರಿಯ ವಿದೇಶದದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಅವರ ಕಿರಿಯ ಮಗ ಎಲ್ಲಾ ಅಂತಿಮ ವಿಧಿವಿಧಾನ ನಡೆಸಲಿದ್ದು ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಮುತ್ತಪ್ಪ ರೈ ಅವರ ಆಪ್ತ ವಲಯ ತಿಳಿಸಿದೆ.
2013 ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…