ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಬೆಳಗ್ಗೆ 2 ಗಂಟೆಗೆ ನಿಧನರಾಗಿದ್ದಾರೆ. ಕಳೆದ ಕೆಲವು ಸಮಯಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಅವರು ಕಳೆದ ತಿಂಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು.
ಪುತ್ತೂರು ತಾಲೂಕಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಭೂಗತ ಲೋಕದಲ್ಲಿ ಗುರುತಿಸಿಕೊಂಡು ನಂತರ ಮನಪರಿವರ್ತನೆಯಾಗಿ ಸಮಾಜ ಸೇವೆಯಲ್ಲಿ ತೊಡಗಿದ್ದರು. ಜಯಕರ್ನಾಟಕ ಸಂಘಟನೆಯ ಮೂಲಕ ಕನ್ನಡಿಗರಿಗೆ ನೆರವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು.
ಮುತ್ತಪ್ಪ ರೈ ಅವರಿಗೆ ಇಬ್ಬರು ಮಕ್ಕಳಿದ್ದು, ಅವರ ಇಚ್ಚೆಯಂತೆ ಬಂಟ ಸಮುದಾಯದ ಸಂಪ್ರದಾಯದ ಪ್ರಕಾರ ಅವರ ಧರ್ಮಪತ್ನಿಯ ಸಮಾಧಿಯ ಬಳಿಯೇ ಬಿಡದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದ್ದು ಮುತ್ತಪ್ಪ ರೈ ಅವರ ಹಿರಿಯ ವಿದೇಶದದಲ್ಲಿ ಇದ್ದಾರೆ. ಅವರು ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತಕ್ಕೆ ಬರಲು ಸಾಧ್ಯವಿಲ್ಲ. ಹೀಗಾಗಿ ಅವರ ಕಿರಿಯ ಮಗ ಎಲ್ಲಾ ಅಂತಿಮ ವಿಧಿವಿಧಾನ ನಡೆಸಲಿದ್ದು ಕುಟುಂಬದ 25 ಜನ ಮಾತ್ರ ಭಾಗಿಯಾಗುತ್ತಾರೆ ಎಂದು ಮುತ್ತಪ್ಪ ರೈ ಅವರ ಆಪ್ತ ವಲಯ ತಿಳಿಸಿದೆ.
2013 ರಲ್ಲಿ ಇವರ ಪತ್ನಿ ರೇಖಾ ಅವರು ಅನಾರೋಗ್ಯದಿಂದ ಸಿಂಗಾಪುರದ ಎಲಿಜಬೆತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…