ಸುಳ್ಯ: ನಗರ ಪಂಚಾಯತ್ ವ್ಯಾಪ್ತಿಯ ಜಯನಗರದ ಕೈೂಂಗೋಡಿ ರಸ್ತೆ ಬದಿಯಲ್ಲಿರುವ ನೀರಿನ ಟ್ಯಾಂಕ್ ಸ್ವಚ್ಛತಾ ಕಾರ್ಯದಲ್ಲಿ ಸ್ಥಳೀಯ ಯವಕರು ತೊಡಗಿಸಿಕೊಂಡರು.
ಕಳೆದ ಕೆಲವು ವರ್ಷಗಳಿಂದ ಇಲ್ಲಿ ಕುಡಿಯುವ ನೀರಿನ ಟ್ಯಾಂಕ್ ಶುಚಿಗೊಳಿಸಿರಲಿಲ್ಲ. ಹೀಗಾಗಿ ಸಾರ್ವಜನಿಕ ಕುಡಿಯುವ ನೀರಿನ ಮೂಲ, ಕೆರೆ, ನದಿ, ಬಾವಿ ನೀರಿನ ಟ್ಯಾಂಕ್ ಶುಚಿತ್ವವು ಪ್ರಾಮುಖ್ಯ ಎಂಬುದನ್ನು ಅರಿತು ಈ ಬಗ್ಗೆ ಆಡಳಿತಕ್ಕೂ ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಮುಂದಾದರು.
ಇಲ್ಲಿ ವಿದ್ಯುತ್ ಕೈಕೊಟ್ಟರೆ ನೀರೂ ಇಲ್ಲವಾಗುತ್ತದೆ. ಎರಡು ವಾರ್ಡಿನ ಸುಮಾರು 40-50 ಕುಟುಂಬ ಈ ಟ್ಯಾಂಕ್ ನೀರನ್ನು ಅವಲಂಬಿಸಿದ್ದಾರೆ.
ಸುಳ್ಯ ಜಯನಗರದ ಜನಸಾಮಾನ್ಯ ಶ್ರಮಿಕ ಯುವಕರಾದ ದೀಕ್ಷಿತ್ ಕುಮಾರ್ ಜಯನಗರ, ಸುಂದರ ಕುದ್ಪಾಜೆ , ಅವಿಲ್ ಜಯನಗರ, ಉಮೇಶ್ ಕುದ್ಪಾಜೆ, ಗೋಪಾಲ ನಾರಾಜೆ,ವಿವೇಕ್ ಕುದ್ಪಾಜೆ, ಬಾಬು ಕೆಪಿ. , ಸಚಿನ್ ಕೊಯಿಂಗೋಡಿ, ದೇವಪ್ಪ ಜಯನಗರ ಒಂದಾಗಿ, ಟ್ಯಾಂಕ್ ಸ್ವಚ್ಚತಾ ಕಾರ್ಯವನ್ನು ನಡೆಸಿದ್ದಾರೆ.
ಬೇಸಿಗೆ ಬಿಸಿಲು ತೀವ್ರಗೊಳ್ಳುತ್ತಿದ್ದಂತೆ ಜನ, ಜಾನುವಾರುಗಳ ಜೊತೆಗೆ ಪ್ರಾಣಿ-ಪಕ್ಷಿಗಳಿಗೂ ನೀರು ಮತ್ತು ಆಹಾರದ…
ಕೃಷಿ-ಆಹಾರ ವ್ಯವಸ್ಥೆಯಲ್ಲಿ ಮಹಿಳೆಯರ ನಾಯಕತ್ವ ಬಲಪಡಿಸಲು ಜಾಗತಿಕ ಸಮ್ಮೇಳನದಲ್ಲಿ ಮಹತ್ವದ ನಿರ್ಧಾರಗಳು ಕೈಗೊಳ್ಳಲಾಗಿದೆ.…
ಖಾರೀಫ್ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…
ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…