ಸುದ್ದಿಗಳು

ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮದಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಜಯನಗರ ವಿಕ್ರಮ ಯುವಕ ಮಂಡಲ ಹಾಗೂ ನಗರ ಪಂಚಾಯತ್ ಸುಳ್ಯ ಇದರ ಆಶ್ರಯದಲ್ಲಿ ಜಯನಗರ ಹಿಂದು ರುದ್ರ ಭೂಮಿಯ ಪರಿಸರದಲ್ಲಿ ಶ್ರಮ ದಾನ ಕಾರ್ಯಕ್ರಮ ಭಾನುವಾರ ನಡೆಯಿತು.

Advertisement

ಪರಿಸರದಲ್ಲಿ ಕಾಡುಗಿಡಗಳು ಬೃಹತ್ ಪ್ರಮಾಣದಲ್ಲಿ ಬೆಳೆದು ,ಗಿಡ ಬಳ್ಳಿಗಳಿಂದ ರುದ್ರ ಭೂಮಿಗೆ ಸಾಗುವ ದಾರಿಯಲ್ಲಿ ಆವರಿಸಿಕೊಂಡಿದೆ.ಸುಳ್ಯ ನ.ಪಂ ವತಿಯಿಂದ ದೀಪಗಳು ,ದಾರಿ ದೀಪಗಳು ಅಳವಡಿಸಲಾಗಿದ್ದರೂ ಇದೀಗ ಅದು ಯಾವುದು ಈಗ ಕೆಲಸಕ್ಕೆ ಬಾರದೆ ಪರಿಸರ ಕತ್ತಲುಮಯವಾಗಿದೆ.ಸ್ಥಳೀಯರ ಪ್ರಕಾರ ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಒಂದು ಮೃತ ದೇಹವನ್ನು ಶವಸಂಸ್ಕಾರಕ್ಕೆ ತಂದಿದ್ದು ಸ್ಥಳದಲ್ಲಿ ದೀಪದ ಬೆಳಕಿನ ಸೌಲಭ್ಯಗಳು ಇಲ್ಲದ ಕಾರಣದಿಂದಾಗಿ ಮೃತ ಶರೀರವನ್ನು ಬೇರೆ ಕಡೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಹೀಗಾಗಿ ಸ್ಥಳೀಯ ಸಂಘಸಂಸ್ಥೆಗಳು ಶ್ರಮದಾನದ ಮೂಲಕ ಪರಿಹಾರಕ್ಕೆ ಮುಂದಾದರು. ಸಂಬಂಧಿಸಿದ ಇಲಾಖೆಗಳು ಸ್ಪಂದಿಸಿ ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಮುಂದೆ ಬರಬೇಕಾಗಿದೆ. ಕಳೆದ ಕೆಲವು ವರ್ಷಗಳಿಂದ ವಿಕ್ರಮ ಯುವಕ ಮಂಡಲ .ರಿ.ಜಯನಗರ ಸಂಘದಿಂದ ಈ ಪರಿಸರದಲ್ಲಿ ಶ್ರಮದಾನ ನಡೆಸಿ ಸಹಕಾರ ನೀಡಲಾಗುತ್ತಿದೆ.
ಶ್ರಮದಾನ ಮಾತ್ರ ಸಾಲದು ,ಮೂಲಭೂತ ಸೌಲಭ್ಯಗಳಾದ ದಾರಿ ದೀಪ,ಹೈಮಾಕ್ಸ್ ದೀಪಗಳ ದುರಸ್ತಿ ಕಾರ್ಯ ಕೂಡಲೆ ನಡೆಯಬೇಕಾಗಿದೆ ಎಂದು ಸ್ಥಳೀಯರ ಅಭಿಪ್ರಾಯವಾಗಿದೆ.

ಶ್ರಮದಾನದ ಸಂದರ್ಭ  ನ.ಪಂ ಸ್ಥಳೀಯ ಸದಸ್ಯೆ ಶಿಲ್ಪಾ ಸುದೇವ,ವಿಕ್ರಮ ಯುವಕ ಮಂಡಲ ಅದ್ಯಕ್ಷ ಪ್ರಸನ್ನ ಎಂ ಆರ್,ಮಾಜಿ ಅದ್ಯಕ್ಷರುಗಳಾದ ಪ್ರವೀಣ್ ಕುಮಾರ್,ಸುರೇಂದ್ರ ಕಾಮತ್,ಸುಧೇವ ಜಯನಗರ,ಸಮಿತಿಯ ಪದಾಧಿಕಾರಿಗಳು, ಸರ್ವ ಸದಸ್ಯರು  ಭಾಗವಹಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

3 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

5 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

6 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

12 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

18 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

18 hours ago